Featured

ಕೊರೋನ ದಲ್ಲಿ ಸ್ತಬ್ದವಾಗಿದ್ದ ರಂಗ ಚಟುವಟಿಕೆ ಉಡುಪಿಯಲ್ಲಿ ಮತ್ತೆ ಪ್ರಾರಂಭ -Vishwanews24

ಕೊರೋನ ದಲ್ಲಿ ಸ್ತಬ್ದವಾಗಿದ್ದ ರಂಗ ಚಟುವಟಿಕೆ ಉಡುಪಿಯಲ್ಲಿ ಮತ್ತೆ ಪ್ರಾರಂಭ -Vishwanews24

ಶ್ರೀಮತಿ ಶಿಲ್ಪಾ ಜೋಶಿಯವರ ಏಕವ್ಯಕ್ತಿ ರಂಗಪ್ರಯೋಗ ಪ್ರದರ್ಶನ..

ಉಡುಪಿ: ಕೊರೋನ ದಲ್ಲಿ ಸ್ತಬ್ದವಾಗಿದ್ದ ರಂಗ ಚಟುವಟಿಕೆ ಉಡುಪಿಯಲ್ಲಿ ಮತ್ತೆ ಪ್ರಾರಂಭವಾಗಿದ್ದು, ಇತ್ತೀಚೆಗೆ ಮಣಿಪಾಲದ ನಿರ್ಮಿತಿ ಕೇಂದ್ರದ ಸುಂದರ ಪರಿಸರದಲ್ಲಿ ರಸಿಕರತ್ನ ವಿಟ್ಲ ಜೋಶಿ ಪ್ರತಿಷ್ಠಾನ (ರಿ) ಪರ್ಕಳ , ನಿರ್ಮಿತಿ ಕೇಂದ್ರ , ಮಣಿಪಾಲ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿ ಇವರ ಸಹಕಾರ ದೊಂದಿಗೆ ಶ್ರೀಮತಿ ಶಿಲ್ಪಾ ಜೋಶಿಯವರ ಏಕವ್ಯಕ್ತಿ ರಂಗಪ್ರಯೋಗ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರವಾಯಿತು.

ಕಾರ್ಯಕ್ರಮದ ಪ್ರಾರಂಭದಲ್ಲಿ ಭಾವಗೀತೆಗಳ ಭಾವಸಂಜೆಯಲ್ಲಿ ಉಡುಪಿಯ ಕಲಾವಿದರಾದ ರೇಖ ಸಾಮಗ, ಡಾ.ಪ್ರತಿಮ, ಡಾ.ಪ್ರಜ್ಞಾ ಮಾರ್ಪಳ್ಳಿ ಹಾಗೂ ರಂಜನಿಯವರು ಸುಂದರ ಭಾವಗೀತೆಗಳನ್ನು ಹಾಡಿ ಸಂಜೆಯ ಇಂಪನ್ನು ಹೆಚ್ಚಿಸಿದರು. ನಂತರ ನಡೆದ ಏಕವ್ಯಕ್ತಿ ಪ್ರದರ್ಶನ ನನ್ನೊಳಗಿನ ಅವಳು

ರಚನೆ ಹಾಗೂ ಅಭಿನಯ – ಶಿಲ್ಪಾ ಜೋಶಿ, ಗೀತಂ ಗಿರೀಶ್ ರವರ ಸಂಗೀತ , ಹಾಗೂ ರವಿರಾಜ್ ಹೆಚ್ ಪಿ ಯವರ ಪರಿಕಲ್ಪನೆ ಹಾಗೂ ನಿರ್ದೇಶನದ ರಂಗಪ್ರಯೋಗ ಜನಮನ್ನಣೆಗೆ ಪಾತ್ರವಾಯಿತು.

ಕಾರ್ಯ ಕ್ರಮದ ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಜೋಶಿ ಪ್ರತಿಷ್ಠಾನದ ಅಧ್ಯಕ್ಷ ಡಾ. ಹರೀಶ್ ಜೋಶಿ . ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ಪ್ರಭಾ ಶೆಣೈ ಮಾತನಾಡಿದರು. ಜೋಶಿ ಪ್ರತಿಷ್ಠಾನದ ಕಾರ್ಯದರ್ಶಿ ಶಿಲ್ಪಾಜೋಶಿಯವರು ಧನ್ಯವಾದ ಸಮರ್ಪಿಸಿದರು. ರಂಗನಟಿ ಪವಿತ್ರ ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭದಲ್ಲಿ

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಶ್ರೀ ವಿಶ್ವನಾಥಶೆಣೈ, ಹಿರಿಯ ಮುಂಬೈ ಕನ್ನಡ ರಂಗಭೂಮಿಯ ಹೆಸರಾಂತ ನಟ ಮೋಹನ್ ಮಾರ್ನಾಡ್, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಉಪಾಧ್ಯಕ್ಷರಾದ ನಾಗರಾಜ್ ಹೆಬ್ಬಾರ್ ಸಂಧ್ಯಾ ಶೆಣೈ ಸುಗುಣ ಸುವರ್ಣ ಹಾಗೂ ಸಂಘಟಕ ಈಶ್ವರ ಶೆಟ್ಟಿ ಚಿಟ್ಪಾಡಿ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ ದುರುಪಯೋಗ : ದಿನೇಶ್ ಗುಂಡೂರಾವ್ -vishwanews24

ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ  ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…

1 day ago

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ -vishwanews24

ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…

1 day ago

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ – 2026 -vishwanews24

ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…

1 day ago

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ -vishwanews24

ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…

1 day ago

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಸುವರ್ಣ -vishwanews24

ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…

1 day ago

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ -vishwanews24

ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…

1 day ago