Featured

ಕೊಲಂಬೊ : ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜೀನಾಮೆ ಅಂಗೀಕಾರ ; ಏಳು ದಿನದಲ್ಲಿ ಲಂಕಾದ ನೂತನ ಅಧ್ಯಕ್ಷರ ಆಯ್ಕೆ – Vishwanews24

ಕೊಲಂಬೊ : ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜೀನಾಮೆ ಅಂಗೀಕಾರ ; ಏಳು ದಿನದಲ್ಲಿ ಲಂಕಾದ ನೂತನ ಅಧ್ಯಕ್ಷರ ಆಯ್ಕೆ – Vishwanews24

ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಮಾಲ್ಡೀವ್ಸ್ ನಿಂದ ಸಿಂಗಾಪುರಕ್ಕೆ ತೆರಳಿದ ನಂತರ ಸಲ್ಲಿಸಿರುವ ರಾಜೀನಾಮೆ ಅಂಗೀಕರಿಸಿರುವುದಾಗಿ ಶ್ರೀಲಂಕಾ ಸಂಸತ್ ಸ್ಪೀಕರ್ ತಿಳಿಸಿದ್ದು, ಏಳು ದಿನದೊಳಗೆ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದರು.

ಶ್ರೀಲಂಕಾದಿಂದ ಪರಾರಿಯಾಗಿರುವ ಗೊಟಬಯ ರಾಜಪಕ್ಸ ಅಧ್ಯಕ್ಷ ಸ್ಥಾನಕ್ಕೆ ಕಾನೂನು ಪ್ರಕಾರವಾಗಿ ರಾಜೀನಾಮೆ ನೀಡಿದ್ದು, ಇದು ಗುರುವಾರದಿಂದಲೇ ಅನ್ವಯವಾಗಲಿದೆ ಎಂದು ಲಂಕಾ ಸ್ಪೀಕರ್ ಮಹೀಂದ ಯಾಪಾ ಅಬೆಯವರ್ದನಾ ಸುದ್ದಿಗಾರರ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಮಾಲ್ಡೀವ್ಸ್ ನಲ್ಲಿದ್ದ ಗೊಟಬಯ ರಾಜಪಕ್ಸ ವಿಶೇಷ ವಿಮಾನದ ಮೂಲಕ ಸಿಂಗಾಪುರಕ್ಕೆ ತೆರಳಿದ್ದು, ಅಲ್ಲಿಂದಲೇ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಲಂಕಾ ಸಂಸತ್ ನಲ್ಲಿ ರಾಜಕೀಯ ಬಿಕ್ಕಟ್ಟಿನ ಕುರಿತು ಸರ್ವ ಪಕ್ಷಗಳ ಸಭೆ ನಡೆಯುತ್ತಿರುವುದಾಗಿ ವರದಿ ವಿವರಿಸಿದೆ.

ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿದ್ದ ದ್ವೀಪರಾಷ್ಟ್ರ ಶ್ರೀಲಂಕಾದಲ್ಲಿ ಜನರು ಬೀದಿಗಿಳಿದು ಗೊಟಬಯ ರಾಜಪಕ್ಸ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆ ತೀವ್ರ ಸ್ವರೂಪ ತಾಳುತ್ತಿದ್ದಂತೆಯೇ ಗೊಟಬಯ ಲಂಕಾದಿಂದ ಮಾಲ್ಡೀವ್ಸ್ ಗೆ ಪರಾರಿಯಾಗಿದ್ದರು.

 

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

12 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

12 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

12 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

12 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago