ಬೆಂಗಳೂರು: ಕೊಲೆ ಕೇಸ್ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರು ಗಜೇಂದ್ರ ಅಲಿಯಾಸ್ ಗಜನನ್ನು ಅರೆಸ್ಟ್ ಮಾಡಿದ್ದಾರೆ. ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಕಾಲಿವುಡ್ ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದ. 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಎಂಟನೇ ಆರೋಪಿಯಾಗಿದ್ದ.
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಕೊಲೆ ಕೇಸ್ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.
ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…