Featured

ಕೊಲೆ ಪ್ರಕರಣ : ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂಧನ – vishwanews24

ಕೊಲೆ ಪ್ರಕರಣ : ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂಧನ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಮೈಸೂರಿಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಅರೆಸ್ಟ್‌ ಆಗಿದ್ದಾರೆ.ಚಿತ್ರದುರ್ಗಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾ ಗಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯ ವಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಘಟನೆಯ ವಿವರ:
ನಟ ದರ್ಶನ್ ಅವರ ಆತ್ಮೀಯರಾದ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್ , ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ.

ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಯಲಾಗಿತ್ತು. ಜೂ. 8ರಂದು ರಾತ್ರಿ ವಿನಯ್ ಎನ್ನುವವರ ಶೆಡ್ ಗೆ ಕರೆತಂದು ಬಲವಾಧ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಜೂ. 9ರಂದು ಮೋರಿಯಲ್ಲಿ ಬೀದಿ ನಾಯಿಗಳು ಮೃತದೇಹವನ್ನು ಎಳೆಯುತ್ತಿದ್ದನ್ನು ನೋಡಿ, ಪಕ್ಕದಲ್ಲಿದ್ದ ಅಪಾರ್ಟ್‌ಮೆಂಟ್ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ದರ್ಶನ್ ಸೇರಿದಂತೆ ನಾಲ್ವರು ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂದರ್ಭದಲ್ಲಿ ದರ್ಶನ್ ಅವರು ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.

ಪೊಲೀಸರಿಗೆ ಮೃತದೇಹ ಸಿಕ್ಕಾಗ ತನಿಖೆ ಶುರುವಾಗಿದೆ. ಈ ಪ್ರಕರಣದಲ್ಲಿ ಮೂವರು ಮೊದಲು ಠಾಣೆಗೆ ಬಂದು ನಾವೇ ಕೊಲೆ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಈ ಕೊಲೆ ಮಾಡಿದ್ದೇ ವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರಿಗೆ ಈ ಬಗ್ಗೆ ಸಂಶಯ ಉಂಟಾಗಿದೆ. ಮತ್ತಷ್ಟು ಆಳವಾಗಿ ತನಿಖೆ ನಡೆಸಿದಾಗ ಘಟನೆ ಹಿಂದಿನ ಕಾರಣ ತಿಳಿದು ಬಂದಿದೆ.

ಬೆಂಗಳೂರಿನ ಶೆಡ್ ವೊಂದರಲ್ಲಿ ರೇಣುಕಾ ಸ್ವಾಮಿ ಅವರ ಕೊಲೆಯಾಗಿತ್ತು. ಮೊದಲಿಗೆ ಇದೊಂದು ಆತ್ಮಹತ್ಯೆ ಪ್ರಕರಣವೆನ್ನಲಾಗಿತ್ತು. ಆದರೆ ತನಿಖೆಯ ಬಳಿಕ ಇದೊಂದು ಕೊಲೆ ಎನ್ನುವುದು ಗೊತ್ತಾಗಿದೆ. ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ಹೇಳಿರುವುದಾಗಿ ತಿಳಿದು ಬಂದಿದೆ.

ಸದ್ಯ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

21 hours ago