ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಮೈಸೂರಿಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಅರೆಸ್ಟ್ ಆಗಿದ್ದಾರೆ.ಚಿತ್ರದುರ್ಗಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾ ಗಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯ ವಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.
ಘಟನೆಯ ವಿವರ:
ನಟ ದರ್ಶನ್ ಅವರ ಆತ್ಮೀಯರಾದ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್ , ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ.
ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಯಲಾಗಿತ್ತು. ಜೂ. 8ರಂದು ರಾತ್ರಿ ವಿನಯ್ ಎನ್ನುವವರ ಶೆಡ್ ಗೆ ಕರೆತಂದು ಬಲವಾಧ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಜೂ. 9ರಂದು ಮೋರಿಯಲ್ಲಿ ಬೀದಿ ನಾಯಿಗಳು ಮೃತದೇಹವನ್ನು ಎಳೆಯುತ್ತಿದ್ದನ್ನು ನೋಡಿ, ಪಕ್ಕದಲ್ಲಿದ್ದ ಅಪಾರ್ಟ್ಮೆಂಟ್ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ದರ್ಶನ್ ಸೇರಿದಂತೆ ನಾಲ್ವರು ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂದರ್ಭದಲ್ಲಿ ದರ್ಶನ್ ಅವರು ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.
ಪೊಲೀಸರಿಗೆ ಮೃತದೇಹ ಸಿಕ್ಕಾಗ ತನಿಖೆ ಶುರುವಾಗಿದೆ. ಈ ಪ್ರಕರಣದಲ್ಲಿ ಮೂವರು ಮೊದಲು ಠಾಣೆಗೆ ಬಂದು ನಾವೇ ಕೊಲೆ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಈ ಕೊಲೆ ಮಾಡಿದ್ದೇ ವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರಿಗೆ ಈ ಬಗ್ಗೆ ಸಂಶಯ ಉಂಟಾಗಿದೆ. ಮತ್ತಷ್ಟು ಆಳವಾಗಿ ತನಿಖೆ ನಡೆಸಿದಾಗ ಘಟನೆ ಹಿಂದಿನ ಕಾರಣ ತಿಳಿದು ಬಂದಿದೆ.
ಬೆಂಗಳೂರಿನ ಶೆಡ್ ವೊಂದರಲ್ಲಿ ರೇಣುಕಾ ಸ್ವಾಮಿ ಅವರ ಕೊಲೆಯಾಗಿತ್ತು. ಮೊದಲಿಗೆ ಇದೊಂದು ಆತ್ಮಹತ್ಯೆ ಪ್ರಕರಣವೆನ್ನಲಾಗಿತ್ತು. ಆದರೆ ತನಿಖೆಯ ಬಳಿಕ ಇದೊಂದು ಕೊಲೆ ಎನ್ನುವುದು ಗೊತ್ತಾಗಿದೆ. ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ಹೇಳಿರುವುದಾಗಿ ತಿಳಿದು ಬಂದಿದೆ.
ಸದ್ಯ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…