Featured

ಕೊಲೆ ಪ್ರಕರಣ : ದರ್ಶನ್‌ ಅರೆಸ್ಟ್‌ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಪೊಲೀಸರ ವಶಕ್ಕೆ – vishwanews24

ಕೊಲೆ ಪ್ರಕರಣ : ದರ್ಶನ್‌ ಅರೆಸ್ಟ್‌ ಬೆನ್ನಲ್ಲೇ, ನಟಿ ಪವಿತ್ರಾ ಗೌಡ ಪೊಲೀಸರ ವಶಕ್ಕೆ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ಸೇರಿದಂತೆ 10 ಜನರನ್ನು ಬಂಧಿಸಿದ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಟ ದರ್ಶನ್‌ ಅವರೊಂದಿಗೆ ಕಳೆದ ಕೆಲ ಸಮಯದಿಂದ ಪವಿತ್ರಾ ಗೌಡ ಆತ್ಮೀಯವಾಗಿದ್ದಾರೆ. ದರ್ಶನ್‌ ಹಾಗೂ ಪವಿತ್ರಾ ಹಲವು ಸಮಾರಂಭದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ನಡುವಿನ ಸ್ನೇಹದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆದಿದೆ.

ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವ ವ್ಯಕ್ತಿ ಸೋಶಿಯಲ್‌ ಮೀಡಿಯಾದಲ್ಲಿ ಮೆಸೇಜ್‌ ಹಾಗೂ ಆಶ್ಲೀಲ, ಫೋಟೋ ವಿಡಿಯೋಗಳನ್ನು ಕಳುಹಿಸುತ್ತಿದ್ದ. ಈ ವಿಚಾರ ದರ್ಶನ್‌ ಅವರ ಅಭಿಮಾನಿಯೊಬ್ಬನಿಗೆ ತಿಳಿದಿದೆ. ಇದಾದ ಬಳಿಕ ಗುಂಪು ಸೇರಿಕೊಂಡು ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಶೆಡ್‌ ವೊಂದರಲ್ಲಿ ಇಟ್ಟು, ಹಲ್ಲೆಗೈದು ಕೊಲೆ ಮಾಡಿ ಮೃತದೇಹವನ್ನು ಮೋರಿಯೊಂದಕ್ಕೆ ಎಸೆದಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಅಪಾರ್ಟ್ಮೆಂಟ್‌ ವೊಂದರ ಭದ್ರತಾ ಸಿಬ್ಬಂದಿಯೊಬ್ಬರು ಮೃತದೇಹವನ್ನು ನಾಯಿಗಳು ಎಳೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮೊದಲಿಗೆ ಆರೋಪಿಗಳು ಬೇರೆ ಕಾರಣಗಳನ್ನು ಹೇಳಿದ್ದು, ಆ ಬಳಿಕ ದರ್ಶನ್‌ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದಿದ್ದಾರೆ.

ಪೊಲೀಸರು ನಟ ದರ್ಶನ್‌ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಇದೀಗ ನಟ ದರ್ಶನ್‌ ಅವರ ಸ್ನೇಹಿತೆ ಪವಿತ್ರಾ ಗೌಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್‌ ಆರ್‌ ನಗರ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪವಿತ್ರಾ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

18 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

19 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

20 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

20 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

20 hours ago