ರಾಜ್ಯ ನ್ಯೂಸ್

ಕೊಲೆ ಮಾಡಿಸುತ್ತಿದೆ ಸಿಎಂ ನೇತೃತ್ವದ ಕಾಂಗ್ರೆಸ್​ ಸರ್ಕಾರ: ಅಮಿತ್​ ಷಾ

ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರ ಬದುಕಿ ಎಂದು ಹೇಳುತ್ತಿದ್ದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಲೆಗಳನ್ನು ಮಾಡಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಹೇಳಿದರು.

ಸಭೆಯಲ್ಲಿ ಮಾತನಾಡಿ, ಸಚಿವರಾದ ಡಿ.ಕೆ.ಶಿವಕುಮಾರ್​, ಕೆ.ಜೆ.ಜಾರ್ಜ್​, ಕೃಷ್ಣಪ್ಪ ಭ್ರಷ್ಟಾಚಾರದ ಮೆಡಲ್​ ಹಾಕಿಕೊಂಡು ಸರ್ಕಾರದಲ್ಲಿ ಇದ್ದಾರೆ ಎಂದು ಆರೋಪ ಮಾಡಿದರು.

ಈ ಬಾರಿ ಚುನಾವಣೆ ಗೆಲುವು ಬೂತ್​ ಮಟ್ಟದ ಕಾರ್ಯಕರ್ತರ ಕೈಯಲ್ಲಿದೆ. ಬೇರೆ ಪಕ್ಷಗಳಲ್ಲಿ ಚುನಾವಣೆ ನಾಯಕರ ನೇತೃತ್ವದಲ್ಲಿ ನಡೆದರೆ, ನಮ್ಮ ಬಿಜೆಪಿಯಲ್ಲಿ ಕಾರ್ಯಕರ್ತರನ್ನು ಕೇಂದ್ರೀಕರಿಸಿ ನಡೆಸಲಾಗುತ್ತದೆ. 10 ಜನರಿಂದ ಆರಂಭವಾದ ನಮ್ಮ ಪಕ್ಷ ಇವತ್ತು ವಿಶ್ವದ ಅತಿ ದೊಡ್ಡ ಪಕ್ಷವಾಗಿದೆ‌. 20 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಮೋದಿಯವರ ಕೆಲಸದಿಂದ ಭಾರತ ವಿಶ್ವಮಟ್ಟದಲ್ಲಿ ಹೆಸರಾಗಿದೆ ಎಂದು ಹೇಳಿದರು.
ಈ ಚುನಾವಣೆ ಬಿಜೆಪಿಗೆ ಮಹತ್ವದ್ದಾಗಿದೆ. ಕರ್ನಾಟಕದಲ್ಲಿ ಯಡಿಯೂರಪ್ಪನವರನ್ನು ಸಿಎಂ ಮಾಡುವವರೆಗೂ ಕಾರ್ಯಕರ್ತರು ನಿದ್ದೆ ಮಾಡಬಾರದು. ಮೇ 15 ರಂದು ಯಡಿಯೂರಪ್ಪನವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದರು.

ಕರ್ನಾಟಕವನ್ನು ಹಾಳುಗೆಡವಿದ ಸಿಎಂ

ಕರ್ನಾಟಕ, ಬೆಂಗಳೂರನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಬೆಂಗಳೂರು ವಿಕಾಸ ಆಗಬೇಕು. ಈ ಸರ್ಕಾರದ ಎಲ್ಲ ನಾಯಕರಿಗೆ ಕಾಮಗಾರಿಗಳ ಕಮಿಷನ್​ ಹೋಗಲೇಬೇಕು. ಮೋದಿ ಸರ್ಕಾರ ಕರ್ನಾಟಕಕ್ಕೆ 3 ಲಕ್ಷ ಕೋಟಿ ರೂಪಾಯಿ ನೀಡಿದೆ. ಆ ಹಣವೆಲ್ಲ ಕಾಂಗ್ರೆಸ್ ನಾಯಕರ ಜೇಬು ಸೇರಿದೆ. ನಮ್ಮ ಸರ್ಕಾರದ ಯಾವ ಯೋಜನೆಗಳನ್ನೂ ಸಿದ್ದರಾಮಯ್ಯ ಜನರಿಗೆ ತಲುಪಿಸಿಲ್ಲ. ಇದೊಂದು ಕಮಿಷನ್​ ಸರ್ಕಾರ ಎಂದು ವಾಗ್ದಾಳಿ ನಡೆಸಿದರು,. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮತ್ತಿತರರು ಪಾಲ್ಗೊಂಡಿದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago