Featured

ಕೊಲ್ಕತ್ತಾ:  ಆಕ್ರೊಪೊಲಿಸ್ ಮಾಲ್‌ನಲ್ಲಿ ಅಗ್ನಿ ಅವಘಡ ; ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ – vishwanews24

ಕೊಲ್ಕತ್ತಾ:  ಆಕ್ರೊಪೊಲಿಸ್ ಮಾಲ್‌ನಲ್ಲಿ ಅಗ್ನಿ ಅವಘಡ… ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ

ಕೊಲ್ಕತ್ತಾ: ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಶುಕ್ರವಾರ ಸಂಭವಿಸಿದ್ದು ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ಅವಘಡ ಸಂಭವಿಸಿದ ಸುದ್ದಿ ತಿಳಿಯುತ್ತಲೇ 10ಕ್ಕೂ ಅಧಿಕ ಅಗ್ನಿಶಾಮಕ ವಾಹನ ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ.

ಕಸ್ಬಾ ಪ್ರದೇಶದಲ್ಲಿರುವ ಶಾಪಿಂಗ್ ಮಾಲ್ ನ ಮೂರನೇ ಮಹಡಿಯಲ್ಲಿ ಮಧ್ಯಾಹ್ನ 12:15 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿರುವುದಾಗಿ ಹೇಳಲಾಗಿದೆ.

ಮಾಹಿತಿಯ ಪ್ರಕಾರ ಕಟ್ಟಡದೊಳಗೆ ಹಲವು ಕಚೇರಿಗಳಿದ್ದು ಸಾಕಷ್ಟು ಮಂದಿ ಈ ಕಟ್ಟಡದಲ್ಲಿ ಇದ್ದರು ಎನ್ನಲಾಗಿದ್ದು ಅಗ್ನಿ ಅವಘಡ ಸಂಭವಿಸುತಿದ್ದಂತೆ ಕಟ್ಟಡದ ಒಳಗಿದ್ದ ಜನರು ಹೊರಕ್ಕೆ ಓಡಿ ಬಂದಿದ್ದು ಇನ್ನು ಕೆಲವರು ಕಟ್ಟಡದ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿಶಾಮಕ ಸಿಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು ಈ ನಡುವೆ ಕಟ್ಟಡದ ಒಳಗೆ ಸಿಲುಕಿರುವವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

ಇದುವರೆಗೂ ಯಾವುದೇ ಸಾವು ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 seconds ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

27 minutes ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

1 hour ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

1 hour ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

2 hours ago