Featured

ಕೊಲ್ಕತ್ತಾ:  ಆಕ್ರೊಪೊಲಿಸ್ ಮಾಲ್‌ನಲ್ಲಿ ಅಗ್ನಿ ಅವಘಡ ; ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ – vishwanews24

ಕೊಲ್ಕತ್ತಾ:  ಆಕ್ರೊಪೊಲಿಸ್ ಮಾಲ್‌ನಲ್ಲಿ ಅಗ್ನಿ ಅವಘಡ… ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ

ಕೊಲ್ಕತ್ತಾ: ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಶುಕ್ರವಾರ ಸಂಭವಿಸಿದ್ದು ಕಟ್ಟಡದೊಳಗೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಬೆಂಕಿ ಅವಘಡ ಸಂಭವಿಸಿದ ಸುದ್ದಿ ತಿಳಿಯುತ್ತಲೇ 10ಕ್ಕೂ ಅಧಿಕ ಅಗ್ನಿಶಾಮಕ ವಾಹನ ದೌಡಾಯಿಸಿದ್ದು ರಕ್ಷಣಾ ಕಾರ್ಯ ನಡೆಯುತ್ತಿದೆ.

ಕಸ್ಬಾ ಪ್ರದೇಶದಲ್ಲಿರುವ ಶಾಪಿಂಗ್ ಮಾಲ್ ನ ಮೂರನೇ ಮಹಡಿಯಲ್ಲಿ ಮಧ್ಯಾಹ್ನ 12:15 ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿರುವುದಾಗಿ ಹೇಳಲಾಗಿದೆ.

ಮಾಹಿತಿಯ ಪ್ರಕಾರ ಕಟ್ಟಡದೊಳಗೆ ಹಲವು ಕಚೇರಿಗಳಿದ್ದು ಸಾಕಷ್ಟು ಮಂದಿ ಈ ಕಟ್ಟಡದಲ್ಲಿ ಇದ್ದರು ಎನ್ನಲಾಗಿದ್ದು ಅಗ್ನಿ ಅವಘಡ ಸಂಭವಿಸುತಿದ್ದಂತೆ ಕಟ್ಟಡದ ಒಳಗಿದ್ದ ಜನರು ಹೊರಕ್ಕೆ ಓಡಿ ಬಂದಿದ್ದು ಇನ್ನು ಕೆಲವರು ಕಟ್ಟಡದ ಒಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಅಗ್ನಿಶಾಮಕ ಸಿಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದು ಈ ನಡುವೆ ಕಟ್ಟಡದ ಒಳಗೆ ಸಿಲುಕಿರುವವರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

ಇದುವರೆಗೂ ಯಾವುದೇ ಸಾವು ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago