Featured

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ

ಉಡುಪಿ: ಬೈಂದೂರು ತಾಲೂಕು ಕೊಲ್ಲೂರು ಗ್ರಾಮ ವ್ಯಾಪ್ತಿಯ ದಳಿ ಎಂಬಲ್ಲಿ ಮೇ 17ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತಪಟ್ಟ ಮಹಿಳೆಯೊಬ್ಬರ ಮೈಮೇಲಿನ ಚಿನ್ನಾಭರಣ ಕಳವು ಮಾಡಿದ್ದ ಆರೋಪಿಯನ್ನು ಕೊಲ್ಲೂರು ಪೊಲೀಸರು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 37/2026 ರಂತೆ ರಸ್ತೆ ಅಪಘಾತ ಪ್ರಕರಣ ದಾಖಲಾಗಿತ್ತು. ಬಳಿಕ ಘಟನಾ ಸ್ಥಳದಲ್ಲಿ ಮೃತಪಟ್ಟ ಮಹಿಳೆಯ ಮೈಮೇಲಿನ ಚಿನ್ನಾಭರಣಗಳನ್ನು ಯಾರೋ ಕಳವು ಮಾಡಿರುವ ಬಗ್ಗೆ ಶ್ರೀಕುಮಾರ ಎಂಬವರು ನೀಡಿದ ದೂರಿನ ಮೇರೆಗೆ ಅಪರಾಧ ಕ್ರಮಾಂಕ 38/2026 ಕಲಂ 303(2) BNS ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ: 

ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಹೆಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ ಅವರ ಮಾರ್ಗದರ್ಶನದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ತಕ್ಷಣ ಕಾರ್ಯಾಚರಣೆ ನಡೆಸಿತು. ಸಿಸಿಟಿವಿ ದೃಶ್ಯಗಳು, ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದ ಫೋಟೋಗಳು ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಯಾದ ಹೇಮಂತ (40), ತಂದೆ ನರಸಿಂಹ ಶೆಟ್ಟಿ, ಕಲ್ಯಾಣಿಗುಡ್ಡೆ ನಿವಾಸಿ, ಕೊಲ್ಲೂರು ಗ್ರಾಮ, ಬೈಂದೂರು ತಾಲೂಕು, ಉಡುಪಿ ಜಿಲ್ಲೆ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ಸುಮಾರು 3.910 ಗ್ರಾಂ ತೂಕದ ಉಂಗುರ (ಅಂದಾಜು ಮೌಲ್ಯ 57 ಸಾವಿರ), 3.450 ಗ್ರಾಂ ತೂಕದ ಬಳೆ (750 ಸಾವಿರ) ಹಾಗೂ 7.160 ಗ್ರಾಂ ತೂಕದ ಸರ (F1 ಲಕ್ಷ) ಸೇರಿದಂತೆ ಒಟ್ಟು ಸುಮಾರು 12.07 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: 

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.ಈ ಕಾರ್ಯಾಚರಣೆಯಲ್ಲಿ ನಾಗೇಂದ್ರ ಹೆಚ್‌ಸಿ, ಲಕ್ಷ್ಮಣ ಗಾಣಿಗ ಹೆಚ್ಚಿಸಿ, ರಾಘವೇಂದ್ರ ಹೆಚ್‌ಸಿ ಹಾಗೂ ನಾಗರಾಜ ಪಿಸಿ ಪಾಲ್ಗೊಂಡಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

20 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

21 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

21 hours ago