Featured

ಕೊಲ್ಲೂರು: ಅರಶಿನಗುಂಡಿ ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ – Vishwanews24

ಕೊಲ್ಲೂರು: ಅರಶಿನಗುಂಡಿ ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ

ಕುಂದಾಪುರ: ಕೊಲ್ಲೂರಿನ ಅರಶಿನ ಗುಂಡಿ ಜಲಪಾತ ವೀಕ್ಷಣೆ ಮಾಡಲು ಹೋಗಿ ಜಾರಿ ಬಿದ್ದು ನೀರುಪಾಲಾಗಿದ್ದ ಭದ್ರಾವತಿ ಮೂಲದ ಯುವಕ ಶರತ್ ಮೃತದೇಹ ವಾರದ ಬಳಿಕ ಪತ್ತೆಯಾಗಿದೆ.

ಜುಲೈ 23ರಂದು ಕೊಲ್ಲೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಅರಶಿನ ಗುಂಡಿ ಜಲಪಾತ ನೋಡಲು 23 ವರ್ಷದ ಶರತ್ ಕುಮಾರ್ ಸ್ನೇಹಿತನೊಂದಿಗೆ ಹೋಗಿದ್ದರು. ಜಲಪಾತದ ಪಕ್ಕದ ಬಂಡೆ ಕಲ್ಲಿನ ಮೇಲೆ ನಿಂತಿದ್ದು ಅವರು ಜಾರಿ ನೀರಿಗೆ ಬಿದ್ದಿದ್ದರು.

ಶರತ್ ಹುಡುಕಾಟಕ್ಕೆ ಹಲವು ತಂಡಗಳು ವಾರಗಳ ಕಾಲ ಶ್ರಮ ವಹಿಸಿದ್ದವು. ಆದರೆ ತೀವ್ರ ಮಳೆ ಮತ್ತು ನೀರಿನ ರಭಸದ ಕಾರಣದಿಂದ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿತ್ತು. ಇದೀಗ ವಾರದ ಬಳಿಕ ಜುಲೈ 30ರಂದು ಬಿದ್ದ ಜಾಗದಿಂದ ಹತ್ತು ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಕೊಲ್ಲೂರು ಪೊಲೀಸರು, ರಾಜ್ಯ ವಿಪತ್ತು ನಿರ್ವಹಣ ತಂಡ (ಎಸ್‌ಡಿಆರ್‌ಎಫ್‌), ಅರಣ್ಯ ಇಲಾಖೆ ಸಿಬಂದಿ, ಅಗ್ನಿ ಶಾಮಕ ದಳದ ಸಿಬಂದಿ, ಸ್ಥಳೀಯರು, ಶರತ್‌ ಅವರ ಸ್ನೇಹಿತರು, ಸಂಬಂಧಿಕರು ಪ್ರತೀ ದಿನ ಹಗಲಿಡೀ ನಿರಂತರ ಹುಡುಕಾಟ ನಡೆಸಿದ್ದರು. ಈಶ್ವರ್ ಮಲ್ಪೆ, ಜ್ಯೋತಿರಾಜ್ ತಂಡವೂ ಹುಡುಕಾಟ ನಡೆಸಿತ್ತು.

ಶರತ್‌ ಪತ್ತೆಗಾಗಿ ಜಲಪಾತ ಹರಿದು ಬರುವ ಬೇರೆ ಬೇರೆ ಕಡೆಗಳಲ್ಲಿ ಸಾಗರ ಬಾರಕೂರು ಅವರ ನೇತೃತ್ವದಲ್ಲಿ ಡ್ರೋನ್‌ ಕೆಮರಾದ ಮೂಲಕ ಹುಡುಕುವ ಪ್ರಯತ್ನ ಮಾಡಲಾಗಿತ್ತು

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

7 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago