Featured

ಕೊಲ್ಲೂರು ದೇವಾಲಯದಲ್ಲಿ ಕನಿಷ್ಠ 100 ಜೋಡಿಗೆ ಕಂಕಣ ಭಾಗ್ಯ ತೊಡಗಿಸಬೇಕು ಎನ್ನುವ ಗುರಿ ಇದೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಕೊಲ್ಲೂರು: ದೇವರ ಮೇಲೆ ಭಕ್ತರು ನಂಬಿಕೆ ಇಟ್ಟು ನೀಡುವ ಕಾಣಿಕೆ ಸೇವೆ ಸದ್ವಿನಿಯೋಗ ಉದ್ದೇಶದಿಂದ ಯೋಜನೆ ರೂಪಿಸಿ ಧಾರ್ಮಿಕ ಕ್ಷೇತ್ರಗಳನ್ನು ಸಮಾಜಮುಖಿಯಾಗಿ ಬೆಳೆಸಬೇಕು. ಮುಜರಾಯಿ ದೇವಾಲಯಗಳಲ್ಲಿ ಸೇವೆಗಳನ್ನು ಆನ್‌ಲೈನ್ ವ್ಯವಸ್ಥೆಗೆ ತರುವ ಚಿಂತನೆ ಇದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೊಲ್ಲೂರಿನಲ್ಲಿ 21 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ ಶ್ರೀ ಮೂಕಾಂಬಿಕಾ ಅನ್ನಪ್ರಸಾದ ಭೋಜನ ಶಾಲೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಮುಜರಾಯಿ ಇಲಾಖೆ ಅಧೀನದಲ್ಲಿರುವ ದೇವಸ್ಥಾನಗಳನ್ನು ಸರ್ಕಾರ ಪಡೆದು ಪ್ರತಿ ವರ್ಷ 1,000 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಬೇಕು ಎನ್ನುವ ಸಂಕಲ್ಪವಿದೆ. ರಾಜ್ಯದಲ್ಲಿ ಅಧಿಕ ಆದಾಯ ಇರುವ ಕೊಲ್ಲೂರಿನಂತಹ ದೇವಾಲಯದಲ್ಲಿ ಕನಿಷ್ಠ 100 ಜೋಡಿಗೆ ಕಂಕಣ ಭಾಗ್ಯ ತೊಡಗಿಸಬೇಕು ಎನ್ನುವ ಗುರಿ ಇದೆ ಎಂದರು.

ರಾಜ್ಯದಲ್ಲಿ ಅಂದಾಜು 190ಕ್ಕಿಂತಲೂ ಹೆಚ್ಚು ’ಎ’ ದರ್ಜೆಯ ದೇವಾಲಯಗಳಿವೆ. ದಿನದಿಂದ ದಿನಕ್ಕೆ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಳ ಆಗುತ್ತಿರುವುದರಿಂದ ಈ ಸಂಖ್ಯೆ ಸದ್ಯದಲ್ಲಿಯೇ 250ಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಮುಜರಾಯಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು 1,000 ಮಂದಿ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂಬ ಮಾಹಿತಿ ನೀಡಿದರು.

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಕೊಲ್ಲೂರು ದೇವಸ್ಥಾನ ಕಾರ್ಯ ನಿರ್ವಹಣಾಧಿಕಾರಿ ಎಚ್.ಕೃಷ್ಣಮೂರ್ತಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ.ವಿ.ಶ್ರೀಧರ ಅಡಿಗ ಮೊದಲಾದವರು ಇದ್ದರು. ಹಿಂದಿನ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಗ್ರಹ ಮಂಡಳಿ ಅಭಿಯಂತರ ಫಯಾಜುದ್ದೀನ್, ಗುತ್ತಿಗೆದಾರ ಕಾಪು ವಾಸುದೇವ ಶೆಟ್ಟಿ, ಯೋಗೀಶ್ವಂದ್ರ ರಾವ್ ಹಾಗೂ ವಿಜಯ್ ಕುಮಾರ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ ಎಂ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

15 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

15 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

15 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

16 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

16 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

16 hours ago