ಕೊಲ್ಲೂರು: ದೇವರ ಮೇಲೆ ಭಕ್ತರು ನಂಬಿಕೆ ಇಟ್ಟು ನೀಡುವ ಕಾಣಿಕೆ ಸೇವೆ ಸದ್ವಿನಿಯೋಗ ಉದ್ದೇಶದಿಂದ ಯೋಜನೆ ರೂಪಿಸಿ ಧಾರ್ಮಿಕ ಕ್ಷೇತ್ರಗಳನ್ನು ಸಮಾಜಮುಖಿಯಾಗಿ ಬೆಳೆಸಬೇಕು. ಮುಜರಾಯಿ ದೇವಾಲಯಗಳಲ್ಲಿ ಸೇವೆಗಳನ್ನು ಆನ್ಲೈನ್ ವ್ಯವಸ್ಥೆಗೆ ತರುವ ಚಿಂತನೆ ಇದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕೊಲ್ಲೂರಿನಲ್ಲಿ 21 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ ಶ್ರೀ ಮೂಕಾಂಬಿಕಾ ಅನ್ನಪ್ರಸಾದ ಭೋಜನ ಶಾಲೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಮುಜರಾಯಿ ಇಲಾಖೆ ಅಧೀನದಲ್ಲಿರುವ ದೇವಸ್ಥಾನಗಳನ್ನು ಸರ್ಕಾರ ಪಡೆದು ಪ್ರತಿ ವರ್ಷ 1,000 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಬೇಕು ಎನ್ನುವ ಸಂಕಲ್ಪವಿದೆ. ರಾಜ್ಯದಲ್ಲಿ ಅಧಿಕ ಆದಾಯ ಇರುವ ಕೊಲ್ಲೂರಿನಂತಹ ದೇವಾಲಯದಲ್ಲಿ ಕನಿಷ್ಠ 100 ಜೋಡಿಗೆ ಕಂಕಣ ಭಾಗ್ಯ ತೊಡಗಿಸಬೇಕು ಎನ್ನುವ ಗುರಿ ಇದೆ ಎಂದರು.
ರಾಜ್ಯದಲ್ಲಿ ಅಂದಾಜು 190ಕ್ಕಿಂತಲೂ ಹೆಚ್ಚು ’ಎ’ ದರ್ಜೆಯ ದೇವಾಲಯಗಳಿವೆ. ದಿನದಿಂದ ದಿನಕ್ಕೆ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಳ ಆಗುತ್ತಿರುವುದರಿಂದ ಈ ಸಂಖ್ಯೆ ಸದ್ಯದಲ್ಲಿಯೇ 250ಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಮುಜರಾಯಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು 1,000 ಮಂದಿ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂಬ ಮಾಹಿತಿ ನೀಡಿದರು.
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಕೊಲ್ಲೂರು ದೇವಸ್ಥಾನ ಕಾರ್ಯ ನಿರ್ವಹಣಾಧಿಕಾರಿ ಎಚ್.ಕೃಷ್ಣಮೂರ್ತಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ.ವಿ.ಶ್ರೀಧರ ಅಡಿಗ ಮೊದಲಾದವರು ಇದ್ದರು. ಹಿಂದಿನ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಗ್ರಹ ಮಂಡಳಿ ಅಭಿಯಂತರ ಫಯಾಜುದ್ದೀನ್, ಗುತ್ತಿಗೆದಾರ ಕಾಪು ವಾಸುದೇವ ಶೆಟ್ಟಿ, ಯೋಗೀಶ್ವಂದ್ರ ರಾವ್ ಹಾಗೂ ವಿಜಯ್ ಕುಮಾರ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ಕುಮಾರ ಎಂ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…