ಕುಂದಾಪುರ: ಕೊಲ್ಲೂರು ಮೂಕಾಂಬಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗಿಗೆ ಭಕ್ತರ ಸೋಗಿನಲ್ಲಿ ಬಂದ ಕಳ್ಳರು ಕನ್ನ ಹಾಕಿದ್ದಾರೆ.
ಮೂಲತಃ ಕೇರಳ ರಾಜ್ಯದ ಹಣಂಗೊರು ಶಾರದ ನಗರದ ನಿವಾಸಿಗಳಾದ ಪ್ರವೀಣ ಎಂಬುವರು ತನ್ನ ಪತ್ನಿ ವಾಣಿಶ್ರೀ ಹಾಗೂ ಮಕ್ಕಳೊಂದಿಗೆ ಸುರತ್ಕಲ್ ನಲ್ಲಿ ವಾಸವಾಗಿದ್ದರು. ಭಾನುವಾರ ಕೊಲ್ಲೂರು ದೇವಸ್ಥಾನಕ್ಕೆ ಬರುವಾಗ ಮನೆಯಲ್ಲಿ ಯಾರೂ ಇಲ್ಲದ ಕಾರಣ 13½ ಪವನ್ ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿ ಇಟ್ಟುಕೊಂಡು ಬಂದಿದ್ದರು. ಬೆಳಿಗ್ಗೆ 11-00 ಗಂಟೆಗೆ ದೇವರ ದರ್ಶನ ಮಾಡಿ ಬೆಳಿಗ್ಗೆ 11-30 ಗಂಟೆಗೆ ದೇವಸ್ಥಾನದ ಹೊರಗಡೆ ಬಂದಾಗ ಪ್ರವೀಣ ಅವರ ಹೆಂಡತಿಯ ವ್ಯಾನಟಿ ಬ್ಯಾಗ್ ನ ಜೀಪ್ ಓಪನ್ ಆಗಿತ್ತೆನ್ನಲಾಗಿದೆ.
ತಕ್ಷಣ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳುವಾಗಿದ್ದು ಬೆಳಕಿಗೆ ಬಂದಿದೆ. ಅದಾಗಲೇ ಭಕ್ತರ ಸೋಗಿನಲ್ಲಿದ್ದ ಕಳ್ಳರು ವಾಣಿಶ್ರೀ ಬ್ಯಾಗಿಗೆ ಕನ್ನ ಹಾಕಿದ್ದರು. ಚಿಕ್ಕ ಪರ್ಸ್ ನಲ್ಲಿದ್ದ 7½ ಪವನ್ ಚಿನ್ನದ ಚೈನ್ -1, 1½ ಪವನ್ ಚಿನ್ನದ ಬಳೆ -2 ಒಟ್ಟು 3 ಪವನ್, 1½ ಪವನ್ ಚಿನ್ನದ ಚೈನ್ -1, ½ ಪವನ್ ಚಿನ್ನದ ಬಳೆ-1, 4 ಜೊತೆ ಚಿನ್ನದ ಕಿವಿ ಓಲೆ ಒಟ್ಟು -1 ಪವನ್ ಎಲ್ಲಾ ಒಟ್ಟು 13½ ಪವನ್ (108 ಗ್ರಾಂ) ಸೇರಿದಂತೆ ಒಟ್ಟು ಅಂದಾಜು ಮೌಲ್ಯ 4 ಲಕ್ಷದ 75 ಸಾವಿರ ರೂಪಾಯಿ ಚಿನ್ನಾಭರಣ ಸ್ವತ್ತುಗಳನ್ನು ಕದ್ದೊಯ್ದಿದ್ದಾರೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…