ಕುಂದಾಪುರ: ಕೊಲ್ಲೂರು ಮೂಕಾಂಬಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗಿಗೆ ಭಕ್ತರ ಸೋಗಿನಲ್ಲಿ ಬಂದ ಕಳ್ಳರು ಕನ್ನ ಹಾಕಿದ್ದಾರೆ.
ಮೂಲತಃ ಕೇರಳ ರಾಜ್ಯದ ಹಣಂಗೊರು ಶಾರದ ನಗರದ ನಿವಾಸಿಗಳಾದ ಪ್ರವೀಣ ಎಂಬುವರು ತನ್ನ ಪತ್ನಿ ವಾಣಿಶ್ರೀ ಹಾಗೂ ಮಕ್ಕಳೊಂದಿಗೆ ಸುರತ್ಕಲ್ ನಲ್ಲಿ ವಾಸವಾಗಿದ್ದರು. ಭಾನುವಾರ ಕೊಲ್ಲೂರು ದೇವಸ್ಥಾನಕ್ಕೆ ಬರುವಾಗ ಮನೆಯಲ್ಲಿ ಯಾರೂ ಇಲ್ಲದ ಕಾರಣ 13½ ಪವನ್ ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿ ಇಟ್ಟುಕೊಂಡು ಬಂದಿದ್ದರು. ಬೆಳಿಗ್ಗೆ 11-00 ಗಂಟೆಗೆ ದೇವರ ದರ್ಶನ ಮಾಡಿ ಬೆಳಿಗ್ಗೆ 11-30 ಗಂಟೆಗೆ ದೇವಸ್ಥಾನದ ಹೊರಗಡೆ ಬಂದಾಗ ಪ್ರವೀಣ ಅವರ ಹೆಂಡತಿಯ ವ್ಯಾನಟಿ ಬ್ಯಾಗ್ ನ ಜೀಪ್ ಓಪನ್ ಆಗಿತ್ತೆನ್ನಲಾಗಿದೆ.
ತಕ್ಷಣ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳುವಾಗಿದ್ದು ಬೆಳಕಿಗೆ ಬಂದಿದೆ. ಅದಾಗಲೇ ಭಕ್ತರ ಸೋಗಿನಲ್ಲಿದ್ದ ಕಳ್ಳರು ವಾಣಿಶ್ರೀ ಬ್ಯಾಗಿಗೆ ಕನ್ನ ಹಾಕಿದ್ದರು. ಚಿಕ್ಕ ಪರ್ಸ್ ನಲ್ಲಿದ್ದ 7½ ಪವನ್ ಚಿನ್ನದ ಚೈನ್ -1, 1½ ಪವನ್ ಚಿನ್ನದ ಬಳೆ -2 ಒಟ್ಟು 3 ಪವನ್, 1½ ಪವನ್ ಚಿನ್ನದ ಚೈನ್ -1, ½ ಪವನ್ ಚಿನ್ನದ ಬಳೆ-1, 4 ಜೊತೆ ಚಿನ್ನದ ಕಿವಿ ಓಲೆ ಒಟ್ಟು -1 ಪವನ್ ಎಲ್ಲಾ ಒಟ್ಟು 13½ ಪವನ್ (108 ಗ್ರಾಂ) ಸೇರಿದಂತೆ ಒಟ್ಟು ಅಂದಾಜು ಮೌಲ್ಯ 4 ಲಕ್ಷದ 75 ಸಾವಿರ ರೂಪಾಯಿ ಚಿನ್ನಾಭರಣ ಸ್ವತ್ತುಗಳನ್ನು ಕದ್ದೊಯ್ದಿದ್ದಾರೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…