ಉಡುಪಿ: ಕೊಲ್ಲೂರು ಮೂಕಾಂಬಿಕೆ ತಾಯಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.
ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದು, ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು.
ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …
ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…
ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…
ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…
ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…