Featured

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇಗುಲದ ನೂತನ ರಥ ಲೋಕಾರ್ಪಣೆಗೆ ಸಿದ್ಧ – Vishwanews24

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇಗುಲದ ನೂತನ ರಥ ಲೋಕಾರ್ಪಣೆಗೆ ಸಿದ್ಧ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಪುರಾತನ ರಥವನ್ನು ಬದಲಾಯಿಸಿ ನೂತನ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಲೋಕಾರ್ಪಣೆಗೆ ಸಿದ್ಧವಾಗಿದೆ.

ಮುರ್ಡೇಶ್ವರದ ಖ್ಯಾತ ಉದ್ಯಮಿ ದಿ| ಆರ್‌.ಎನ್‌. ಶೆಟ್ಟಿ ಅವರ ಪುತ್ರ ಉದ್ಯಮಿ ಸುನಿಲ್‌ ಶೆಟ್ಟಿ ಅವರು ಒಂದು ಕೋಟಿ ರೂ. ವೆಚ್ಚದಲ್ಲಿ ನೂತನ ರಥ ನಿರ್ಮಾಣದ ವೆಚ್ಚ ಭರಿಸಿರುತ್ತಾರೆ.

ಕೋಟೇಶ್ವರದ ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಅವರ ಪುತ್ರ ಶಿಲ್ಪಿ ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಜನವರಿ ಅಥವಾ ಫೆಬ್ರವರಿಯಲ್ಲಿ ನೂತನ ರಥವನ್ನು ಕೊಲ್ಲೂರಿಗೆ ಒಯ್ಯಲಾಗುವುದು. ಮಾರ್ಚ್‌ನಲ್ಲಿ ನಡೆಯಲಿರುವ ದೇಗುಲದ ರಥೋತ್ಸವದಲ್ಲಿ ನೂತನ ರಥ ಬಳಸುವ ಬಗ್ಗೆ ಯೋಜನೆ ರೂಪಿಸಲಾಗಿದೆ.

ದೇಗುಲದಲ್ಲಿ ಈ ವರೆಗೆ ಬಳಸುತ್ತಿದ್ದ ರಥವು ಕೆಳದಿ ಅರಸರ ಕಾಲದ್ದಾಗಿದ್ದು, 400 ವರ್ಷಗಳ ಇತಿಹಾಸವನ್ನು ಹೊಂದಿದೆ. ಆ ರಥದಲ್ಲಿದ್ದ ಶಿಲ್ಪಕಲೆಯಲ್ಲಿ ಯಾವುದೇ ಬದಲಾವಣೆಯಾಗದಂತೆ ನೂತನ ರಥದಲ್ಲಿ ಕೂಡ ರೂಪಿಸಿರುವುದು ರಥ ಶಿಲ್ಪಿಗಳ ಕೈಚಳಕವನ್ನು ಎತ್ತಿಹಿಡಿದಿದೆ.

ಹಳೆಯ ರಥ ಸಂರಕ್ಷಣೆ
400 ವರ್ಷಗಳ ಇತಿಹಾಸ ಹೊಂದಿರುವ ಹಳೆ ರಥವನ್ನು ದೇಗುಲದ ಆನೆಬಾಗಿಲಿನ ಬಳಿ ಸೂಕ್ತ ಸ್ಥಳದಲ್ಲಿ ಸಂರಕ್ಷಣೆ ಮಾಡಿ ಪಾರದರ್ಶಕ ಫ್ರೇಮ್‌ ಬಳಸಿ ಭಕ್ತರ ವೀಕ್ಷಣೆಗೆ ಇಡಲಾಗುವುದು ಎಂದು ದೇಗುಲದ ಕಾರ್ಯನಿರ್ವಹಣಾ ಕಾರಿ ಮಹೇಶ ತಿಳಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

14 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

15 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

16 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

16 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

17 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

17 hours ago