ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಪುರಾತನ ರಥವನ್ನು ಬದಲಾಯಿಸಿ ನೂತನ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಲೋಕಾರ್ಪಣೆಗೆ ಸಿದ್ಧವಾಗಿದೆ.
ಮುರ್ಡೇಶ್ವರದ ಖ್ಯಾತ ಉದ್ಯಮಿ ದಿ| ಆರ್.ಎನ್. ಶೆಟ್ಟಿ ಅವರ ಪುತ್ರ ಉದ್ಯಮಿ ಸುನಿಲ್ ಶೆಟ್ಟಿ ಅವರು ಒಂದು ಕೋಟಿ ರೂ. ವೆಚ್ಚದಲ್ಲಿ ನೂತನ ರಥ ನಿರ್ಮಾಣದ ವೆಚ್ಚ ಭರಿಸಿರುತ್ತಾರೆ.
ಕೋಟೇಶ್ವರದ ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಅವರ ಪುತ್ರ ಶಿಲ್ಪಿ ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.
ಜನವರಿ ಅಥವಾ ಫೆಬ್ರವರಿಯಲ್ಲಿ ನೂತನ ರಥವನ್ನು ಕೊಲ್ಲೂರಿಗೆ ಒಯ್ಯಲಾಗುವುದು. ಮಾರ್ಚ್ನಲ್ಲಿ ನಡೆಯಲಿರುವ ದೇಗುಲದ ರಥೋತ್ಸವದಲ್ಲಿ ನೂತನ ರಥ ಬಳಸುವ ಬಗ್ಗೆ ಯೋಜನೆ ರೂಪಿಸಲಾಗಿದೆ.
ದೇಗುಲದಲ್ಲಿ ಈ ವರೆಗೆ ಬಳಸುತ್ತಿದ್ದ ರಥವು ಕೆಳದಿ ಅರಸರ ಕಾಲದ್ದಾಗಿದ್ದು, 400 ವರ್ಷಗಳ ಇತಿಹಾಸವನ್ನು ಹೊಂದಿದೆ. ಆ ರಥದಲ್ಲಿದ್ದ ಶಿಲ್ಪಕಲೆಯಲ್ಲಿ ಯಾವುದೇ ಬದಲಾವಣೆಯಾಗದಂತೆ ನೂತನ ರಥದಲ್ಲಿ ಕೂಡ ರೂಪಿಸಿರುವುದು ರಥ ಶಿಲ್ಪಿಗಳ ಕೈಚಳಕವನ್ನು ಎತ್ತಿಹಿಡಿದಿದೆ.
ಹಳೆಯ ರಥ ಸಂರಕ್ಷಣೆ
400 ವರ್ಷಗಳ ಇತಿಹಾಸ ಹೊಂದಿರುವ ಹಳೆ ರಥವನ್ನು ದೇಗುಲದ ಆನೆಬಾಗಿಲಿನ ಬಳಿ ಸೂಕ್ತ ಸ್ಥಳದಲ್ಲಿ ಸಂರಕ್ಷಣೆ ಮಾಡಿ ಪಾರದರ್ಶಕ ಫ್ರೇಮ್ ಬಳಸಿ ಭಕ್ತರ ವೀಕ್ಷಣೆಗೆ ಇಡಲಾಗುವುದು ಎಂದು ದೇಗುಲದ ಕಾರ್ಯನಿರ್ವಹಣಾ ಕಾರಿ ಮಹೇಶ ತಿಳಿಸಿದ್ದಾರೆ.
Join our Whatsapp group by clicking the below link 👇👇
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…