Featured

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇಗುಲದ ನೂತನ ರಥ ಲೋಕಾರ್ಪಣೆಗೆ ಸಿದ್ಧ – Vishwanews24

ಕೊಲ್ಲೂರು: ಶ್ರೀ ಮೂಕಾಂಬಿಕಾ ದೇಗುಲದ ನೂತನ ರಥ ಲೋಕಾರ್ಪಣೆಗೆ ಸಿದ್ಧ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಪುರಾತನ ರಥವನ್ನು ಬದಲಾಯಿಸಿ ನೂತನ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು ಲೋಕಾರ್ಪಣೆಗೆ ಸಿದ್ಧವಾಗಿದೆ.

ಮುರ್ಡೇಶ್ವರದ ಖ್ಯಾತ ಉದ್ಯಮಿ ದಿ| ಆರ್‌.ಎನ್‌. ಶೆಟ್ಟಿ ಅವರ ಪುತ್ರ ಉದ್ಯಮಿ ಸುನಿಲ್‌ ಶೆಟ್ಟಿ ಅವರು ಒಂದು ಕೋಟಿ ರೂ. ವೆಚ್ಚದಲ್ಲಿ ನೂತನ ರಥ ನಿರ್ಮಾಣದ ವೆಚ್ಚ ಭರಿಸಿರುತ್ತಾರೆ.

ಕೋಟೇಶ್ವರದ ರಾಷ್ಟ್ರಪ್ರಶಸ್ತಿ ಪುರಸ್ಕೃತ ರಥ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಹಾಗೂ ಅವರ ಪುತ್ರ ಶಿಲ್ಪಿ ರಾಜಗೋಪಾಲ ಆಚಾರ್ಯ ಅವರ ನೇತೃತ್ವದಲ್ಲಿ ರಥ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ.

ಜನವರಿ ಅಥವಾ ಫೆಬ್ರವರಿಯಲ್ಲಿ ನೂತನ ರಥವನ್ನು ಕೊಲ್ಲೂರಿಗೆ ಒಯ್ಯಲಾಗುವುದು. ಮಾರ್ಚ್‌ನಲ್ಲಿ ನಡೆಯಲಿರುವ ದೇಗುಲದ ರಥೋತ್ಸವದಲ್ಲಿ ನೂತನ ರಥ ಬಳಸುವ ಬಗ್ಗೆ ಯೋಜನೆ ರೂಪಿಸಲಾಗಿದೆ.

ದೇಗುಲದಲ್ಲಿ ಈ ವರೆಗೆ ಬಳಸುತ್ತಿದ್ದ ರಥವು ಕೆಳದಿ ಅರಸರ ಕಾಲದ್ದಾಗಿದ್ದು, 400 ವರ್ಷಗಳ ಇತಿಹಾಸವನ್ನು ಹೊಂದಿದೆ. ಆ ರಥದಲ್ಲಿದ್ದ ಶಿಲ್ಪಕಲೆಯಲ್ಲಿ ಯಾವುದೇ ಬದಲಾವಣೆಯಾಗದಂತೆ ನೂತನ ರಥದಲ್ಲಿ ಕೂಡ ರೂಪಿಸಿರುವುದು ರಥ ಶಿಲ್ಪಿಗಳ ಕೈಚಳಕವನ್ನು ಎತ್ತಿಹಿಡಿದಿದೆ.

ಹಳೆಯ ರಥ ಸಂರಕ್ಷಣೆ
400 ವರ್ಷಗಳ ಇತಿಹಾಸ ಹೊಂದಿರುವ ಹಳೆ ರಥವನ್ನು ದೇಗುಲದ ಆನೆಬಾಗಿಲಿನ ಬಳಿ ಸೂಕ್ತ ಸ್ಥಳದಲ್ಲಿ ಸಂರಕ್ಷಣೆ ಮಾಡಿ ಪಾರದರ್ಶಕ ಫ್ರೇಮ್‌ ಬಳಸಿ ಭಕ್ತರ ವೀಕ್ಷಣೆಗೆ ಇಡಲಾಗುವುದು ಎಂದು ದೇಗುಲದ ಕಾರ್ಯನಿರ್ವಹಣಾ ಕಾರಿ ಮಹೇಶ ತಿಳಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

3 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

3 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago