Featured

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್: ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ – vishwanews24

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್: ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ

ಮಂಗಳೂರು: ಬಹುಮುಖ ಪ್ರತಿಭೆಯ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ಬುಧವಾರ ಬೆಳಗ್ಗೆ ನಗರದ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ನಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ.

29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ 5 ಸುತ್ತು ಮತ್ತು 75 ಮೀಟರ್‌ಗಳನ್ನು ಪೂರ್ಣಗೊಳಿಸಿ ದಾಖಲೆ ಬರೆದರು.

‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ (ಜಿಬಿಡಬ್ಲ್ಯುಆರ್) ಸಂಸ್ಥೆಯು ಇವರ ಅಪೂರ್ವ ಸಾಧನೆಯನ್ನು ಗುರುತಿಸಿ, ಅಧಿಕೃತ ಪ್ರಮಾಣಪತ್ರವನ್ನು ಪ್ರದಾನ ಮಾಡಿದೆ.

ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವಾಟರ್ ಸೇಫ್ಟಿ (ಎನ್‌ಐಡಬ್ಲ್ಯುಎಸ್) ತಂಡದ ಅಧೀಕೃತ ಲೈಫ್ ಸೇವರ್‌ ಆಗಿರುವ ರುಬೆನ್ ರುಬೆನ್ ಜೇಸನ್ ಮಚಾದೊ ಅವರು ಹಿಂದೂಸ್ತಾನಿ ಕೊಳಲು (ಫ್ಲೂಟ್) ಮತ್ತು ವೆಸ್ಟರ್ನ್ ಫ್ಲೂಟ್‌ನಲ್ಲಿ ಪರಿಣತರು. ಸ್ಯಾಕ್ಸೋಫೋನ್, ಗಿಟಾರ್ ಮತ್ತು ಇತರ ವಾದ್ಯಗಳನ್ನೂ ನುಡಿಸುವುದರಲ್ಲಿ ಖ್ಯಾತರಾಗಿದ್ದಾರೆ.

ಬಾಲಿವುಡ್‌ಗೆ ಚಿತ್ರಗಳಿಗೆ ಸಂಗೀತ: ರುಬೆನ್ ಜೇಸನ್ ಮಚಾದೊ ಬಾಲಿವುಡ್, ಸ್ಯಾಂಡಲ್‌ವುಡ್ ಮತ್ತು ಕೋಸ್ಟಲ್‌ ಚಲನಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಭಾರತದಾದ್ಯಂತ ಪ್ರಮುಖ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿರುವ ಅವರು 2016ರಲ್ಲಿ ನಡೆದ ವರ್ಲ್ಡ್ ಕಲ್ಚರ್ ಫೆಸ್ಟಿವಲ್‌ನಲ್ಲಿ 150ಕ್ಕೂ ಹೆಚ್ಚು ದೇಶಗಳ ಸಂಗೀತಗಾರರೊಂದಿಗೆ ಗಿನ್ನೆಸ್ ವಿಶ್ವ ದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

ಸಂತ ಅಲೋಸಿಯಸ್ ಕಾಲೇಜಿನಲ್ಲಿ ಸುಮಾರು ಎರಡು ವರ್ಷಗಳ ಕಾಲ ಪತ್ರಿಕೋದ್ಯಮ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ರುಬೆನ್ ಕೊಳಲು ವಾದನದಲ್ಲಿ 15 ವರ್ಷಗಳ ಅನುಭವ ಹೊಂದಿದ್ದಾರೆ.

 

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

19 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

20 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

20 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

20 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

20 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

20 hours ago