ಬೆಂಗಳೂರು : ಕೊವೀಡ್ ಹಾಗೂ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ, ಶಾಲಾ – ಕಾಲೇಜುಗಳನ್ನು ಗಮನದಲ್ಲಿಟ್ಟುಕೊಂಡು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಡಿಸೆಂಬರ್ 9 ರಂದು ನಾಳೆ ಮಹತ್ವದ ಸಭೆ ನಡೆಯಲಿದೆ.
ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಶಿಕ್ಷಣ ಹಾಗೂ ಆರೋಗ್ಯ ಇಲಾಖೆಯ ತಜ್ಞರು ಒಳಗೊಂಡಿರುವ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿಈಗಾಗಲೇ ಶಾಲೆಗಳ ಕುರಿತು ಹೊರಡಿಸಿರುವ ಮಾರ್ಗಸೂಚಿಯನ್ನು ಬದಲಾದ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಣೆಮಾಡುವ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇನ್ನು ಈ ಕುರಿತು ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ರಾಜ್ಯದ 130 ಶಾಲಾ ಮಕ್ಕಳಿಗೆ ಕೊರನಾ ಸೋಂಕು ದೃಢಪಟ್ಟಿದ್ದು, ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ಪೋಷಕರಿಗೆ ಆತಂಕದ ಬೇಡ. ಒಮಿಕ್ರಾನ್ ಅಪಾಯಕಾರಿ ಅಲ್ಲ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಶಾಲೆ-ಕಾಲೇಜುಗಳನ್ನು ಮುಚ್ಚುವ ಉದ್ದೇಶ ಸರ್ಕಾರಕ್ಕೆ ಇಲ್ಲ . ಮಾರ್ಗಸೂಚಿಯನ್ನು ಬದಲಾದ ಪರಿಸ್ಥಿತಿಗೆ ತಕ್ಕಂತೆ ಪರಿಷ್ಕರಣೆ ಇರಾದೆ ಹೊಂದಿದ್ದೇವೆ ಎಂದರು,.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…