ಬೆಂಗಳೂರು: ಕೊವೀಡ್ -19 ವೈರಸ್ ನಂತಹ ಸಂಕಷ್ಟದ ಸಮಯದಲ್ಲಿ ಒಂದು ವೇಳೆ ರಾಜ್ಯದಲ್ಲಿ ಏನಾದರೂ ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಸೋಂಕಿಗೆ ತುತ್ತಾಗಿ 50,000ಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದರು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ, ಅವರು ಸಮ್ಮಿಶ್ರ ಸರ್ಕಾರಕ್ಕೆ ಸಮನ್ವಯತೆಯೇ ಇರಲಿಲ್ಲ ಇನ್ನು ಕೊವೀಡ್ ಹೇಗೆ ನಿಯಂತ್ರಿಸುತ್ತಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ಕಾರಣ ಸಮ್ಮಿಶ್ರ ಸರ್ಕಾರ ಮಾಡುತ್ತಿದ್ದ ದೊಡ್ಡ ಅನಾಹುತ ತಪ್ಪಿತು ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಕೇಂದ್ರ ಸರ್ಕಾರದ ಯಾವುದೇ ಆದೇಶ ಪಾಲನೆ ಮಾಡದೇ ಉಲ್ಲಂಘನೆ ಮಾಡುತ್ತಿದ್ದರು. ಪ್ರಧಾನಿ ಮೋದಿ ಹೇಳಿದರು ಅಂತಾ ಎಲ್ಲವನ್ನೂ ಮಾಡಿಬಿಡಬೇಕೋ ಎಂದು ಪ್ರಶ್ನಿಸುತ್ತಿದ್ದರು. ಸಮ್ಮಿಶ್ರ ಸರ್ಕಾರವಿದ್ದು ಜಮೀರ್ ಅಹಮ್ಮದ್ ಸಚಿವರಾಗಿರುತ್ತಿದ್ದರೆ ಈಗ ಏನಾಗುತ್ತಿತ್ತು? ಕಾಂಗ್ರೆಸ್ ಪಕ್ಷ ಮುಸ್ಲಿಮರ ಪಕ್ಷಪಾತಿ. ಹೀಗಾಗಿ ಯಾರನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಕರ್ನಾಟಕದ ಸ್ಥಿತಿ ಅಮೆರಿಕದ ಕೊರೊನಾ ಸ್ಥಿತಿಯಂತೆ ಆಗಿಬಿಡುತ್ತಿತ್ತು. ಸಮ್ಮಿಶ್ರ ಸರ್ಕಾರದ ಪತನದಿಂದ ಅದು ತಪ್ಪಿದೆ ಎಂದು ಹೇಳಿದರು.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…