ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಜೊತೆಗೆ ಹೈಕಮಾಂಡ್ ಸೂಚನೆಗೆ ಬದ್ಧ ಎಂದು ಹೇಳಿದ್ದಾರೆ. ಗುರುವಾರ ಮಾಧ್ಯಮಗಳ ಮುಂದೆ ಬಿ.ಎಸ್.ಯಡಿಯೂರಪ್ಪ ನೀಡಿದ ಹೇಳಿಕೆಗಳನ್ನು ಗಮನಿಸಿದಾಗ ಸಿಎಂ ಹುದ್ದೆಯಿಂದ ಇಳಿಯುವ ಸಾಧ್ಯತೆ ಹೆಚ್ಚಿದೆ. ಈ ಬೆನ್ನಲ್ಲೇ ಪ್ರಣವಾನಂದ ಸ್ವಾಮೀಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪರ ಬ್ಯಾಟಿಂಗ್ ಬೀಸಿದ್ದಾರೆ. ಸಿಎಂ ಯಡಿಯೂರಪ್ಪರನ್ನು ಬದಲಾವಣೆ ಮಾಡಿದರೆ ಕೋಟ ಶ್ರೀನಿವಾಸ ಪೂಜಾರಿಯನ್ನ ಸಿಎಂ ಮಾಡಬೇಕು ಎಂದು ಪ್ರಣವಾನಂದ ಶ್ರೀ ಹೇಳಿದ್ದಾರೆ.
ಆರ್ಯ ಇಡೀಗ ಸಮಾಜಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಸರ್ಕಾರ ಇದುವರೆಗೂ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿಲ್ಲ. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿದ್ದಾರೆ. ಕೂಡಲೇ ಸರ್ಕಾರ ಬ್ರಹ್ಮಶ್ರೀ ನಾರಾಯಣಸ್ವಾಮಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು. ನಮ್ಮ ಸಮಾಜವನ್ನ ಚುನಾವಣೆಯಲ್ಲಿ ಮಾತ್ರ ಉಪಯೋಗಿಸಿಕೊಳುತ್ತಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆಯಾದರೆ ಮುಖ್ಯಮಂತ್ರಿ ಸ್ಥಾನವನ್ನು ಕೋಟ ಶ್ರೀನಿವಾಸ ಪೂಜಾರಿಗೆ ಕೊಡಬೇಕು ಅಂತ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…