Featured

ಕೋಟಾ ಶ್ರೀನಿವಾಸ ಪೂಜಾರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು: ಪ್ರಣವಾನಂದ ಸ್ವಾಮೀಜಿ -Vishwanews24

ಕೋಟಾ ಶ್ರೀನಿವಾಸ ಪೂಜಾರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು: ಪ್ರಣವಾನಂದ ಸ್ವಾಮೀಜಿ -Vishwanews24

ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಜೊತೆಗೆ ಹೈಕಮಾಂಡ್ ಸೂಚನೆಗೆ ಬದ್ಧ ಎಂದು ಹೇಳಿದ್ದಾರೆ. ಗುರುವಾರ ಮಾಧ್ಯಮಗಳ ಮುಂದೆ ಬಿ.ಎಸ್.ಯಡಿಯೂರಪ್ಪ ನೀಡಿದ ಹೇಳಿಕೆಗಳನ್ನು ಗಮನಿಸಿದಾಗ ಸಿಎಂ ಹುದ್ದೆಯಿಂದ ಇಳಿಯುವ ಸಾಧ್ಯತೆ ಹೆಚ್ಚಿದೆ. ಈ ಬೆನ್ನಲ್ಲೇ ಪ್ರಣವಾನಂದ ಸ್ವಾಮೀಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪರ ಬ್ಯಾಟಿಂಗ್ ಬೀಸಿದ್ದಾರೆ. ಸಿಎಂ ಯಡಿಯೂರಪ್ಪರನ್ನು ಬದಲಾವಣೆ ಮಾಡಿದರೆ ಕೋಟ ಶ್ರೀನಿವಾಸ ಪೂಜಾರಿಯನ್ನ ಸಿಎಂ ಮಾಡಬೇಕು ಎಂದು ಪ್ರಣವಾನಂದ ಶ್ರೀ ಹೇಳಿದ್ದಾರೆ.

ಆರ್ಯ ಇಡೀಗ ಸಮಾಜಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಸರ್ಕಾರ ಇದುವರೆಗೂ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿಲ್ಲ. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿದ್ದಾರೆ. ಕೂಡಲೇ ಸರ್ಕಾರ ಬ್ರಹ್ಮಶ್ರೀ ನಾರಾಯಣಸ್ವಾಮಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು. ನಮ್ಮ ಸಮಾಜವನ್ನ ಚುನಾವಣೆಯಲ್ಲಿ ಮಾತ್ರ ಉಪಯೋಗಿಸಿಕೊಳುತ್ತಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆಯಾದರೆ ಮುಖ್ಯಮಂತ್ರಿ ಸ್ಥಾನವನ್ನು ಕೋಟ ಶ್ರೀನಿವಾಸ ಪೂಜಾರಿಗೆ ಕೊಡಬೇಕು ಅಂತ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.

 

Vishwa News 24

Recent Posts

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

15 minutes ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

23 minutes ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

30 minutes ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

37 minutes ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

2 hours ago

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ – vishwanews24

ಸುರತ್ಕಲ್ ಬಾಲಕಿ ಆತ್ಮಹತ್ಯೆ ಪ್ರಕರಣ : ಪೋಷಕರ ನಡೆ ಕುರಿತು ವಿಷಾದ ವ್ಯಕ್ತಪಡಿಸಿದ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಂಗಳೂರು …

3 hours ago