Featured

ಕೋಟಾ ಶ್ರೀನಿವಾಸ ಪೂಜಾರಿ ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ: ಎಚ್.ಡಿ. ಕುಮಾರಸ್ವಾಮಿ – Vishwanews24

ಕೋಟಾ ಶ್ರೀನಿವಾಸ ಪೂಜಾರಿ ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ..

ಎಲ್ಲರೂ ದುಡ್ಡಿನ ದಂಧೆ ಮಾಡಲು ಬಾಗಿಲು ತೆಗೆದುಕೊಂಡು ಕೂತಿದ್ದಾರೆ..

ಬೆಂಗಳೂರು: ‘ಬಿಜೆಪಿ ಸರಕಾರದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಒಬ್ಬರನ್ನು ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ. ಎಲ್ಲರೂ ದುಡ್ಡಿನ ದಂಧೆ ಮಾಡಲು ಬಾಗಿಲು ತೆಗೆದುಕೊಂಡು ಕೂತಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ದೊಡ್ಡ ದಂಧೆಯೇ ನಡೆಯುತ್ತಿದೆ. ಸಚಿವ ಎಂಟಿಬಿ ನಾಗರಾಜ್ ಯಾಕೆ ಹಾಗೆ ಹೇಳಿದರು? ಅದರ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಎಲ್ಲವೂ ಗೊತ್ತಿದೆ. ನಂದೀಶ್ 80ಲಕ್ಷ ರೂ.ಕೊಟ್ಟು ಮೂರು ತಿಂಗಳು ಆಗಿರಲಿಲ್ಲ. ಅಷ್ಟರಲ್ಲಿ ಅವರನ್ನು ಅಮಾನತು ಮಾಡಿದರು. ಅದರ ನೋವಿನಲ್ಲಿ ನಂದೀಶ್‍ಗೆ ಹೃದಯಾಘಾತ ಆಗಿರಬಹುದು. ಅಲ್ಲಿನ ಶಾಸಕರಿಗೆ ಎಷ್ಟು ಹೋಗಿದೆ, ಯಾರ್ಯಾರಿಗೆ ಎಷ್ಟು ಹೋಗಿದೆ. ಎಲ್ಲವೂ ತನಿಖೆ ಮಾಡಿದ್ರೆ ಹೊರಬರಲಿದೆ ಎಂದು ಒತ್ತಾಯಿಸಿದರು.

ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24

ಕೋಲಾರದಿಂದ ನಾನು ಸ್ಪರ್ಧೆ ಮಾಡುವುದಿಲ್ಲ. ಚನ್ನಪಟ್ಟಣದಲ್ಲಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಕಾರ್ಯಕರ್ತರು ನನ್ನ ಮೇಲಿನ ಅಭಿಮಾನದಿಂದ ಕೋಲಾರದಿಂದ ಸ್ಪರ್ಧೆ ಮಾಡಿ ಎಂದು ಹೇಳಿದ್ದಾರೆ. ಅಲ್ಲಿನ ಜನರ ಸಮಸ್ಯೆ ಏನಿದೆ ಅಂತ ನನಗೆ ಗೊತ್ತಿದೆ. ಕೋಲಾರದಲ್ಲಿ ನಮ್ಮ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಕೆಜಿಎಫ್ ಬಿಟ್ಟು ಉಳಿದ ಕಡೆ ನಮ್ಮ ಶಾಸಕರು ಇದ್ದಾರೆ. ನಾನೇ ಹೋಗಿ ಸ್ಪರ್ಧೆ ಮಾಡಬೇಕು ಎಂದು ಇಲ್ಲ. ಎಲ್ಲ ಮುಖಂಡರ ಜತೆ ಚರ್ಚೆ ಮಾಡಿ ಸಮಸ್ಯೆ ಪರಿಹಾರ ಮಾಡುತ್ತೇನೆ ಎಂದು ಹೇಳಿದರು.

ಸಚಿವ ಎಂಟಿಬಿ ನಾಗರಾಜ್ ವಿಡಿಯೋ ಜಗಜ್ಜಾಹೀರು ಆಗಿದೆ. ಸರಕಾರಕ್ಕೆ ಮರ್ಯಾದೆ ಇದ್ದಾರೆ ತನಿಖೆ ಮಾಡಿಸಲಿ. ಈಗಾಗಲೇ ಸಿಎಂ ತನಿಖೆ ಮಾಡಿಸುವುದಾಗಿ ಹೇಳಿದ್ದಾರೆ. ಆದರೆ, ಏನು, ಯಾವ ರೀತಿ ತನಿಖೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕಿಡಿಕಾರಿದರು.

ಕೆಲ ಸಚಿವರು ಎಷ್ಟೇ ಶ್ರೀಮಂತರಿದ್ದರೂ ಅವರಿಗೆ ಹಣದ ದಾಹ ಕಡಿಮೆಯಾಗಿಲ್ಲ. ಎಷ್ಟು ಸಾಧ್ಯವೋ ಅಷ್ಟನ್ನೂ ಗೋರುತ್ತಿದ್ದಾರೆ. ಈ ಸರಕಾರದಲ್ಲಿ ಕೈನಲ್ಲಿ ಹಣ ಬಾಚುತ್ತಿಲ್ಲ, ಜೆಸಿಬಿಯಲ್ಲಿ, ಹಿಟಾಚಿಯಲ್ಲಿ ಬಾಚುತ್ತಿದ್ದಾರೆ. ಆದೇನು ತನಿಖೆ ಮಾಡುತ್ತಾರೋ ನೋಡೋಣ. ಈ ಸರಕಾರಕ್ಕೆ ನಾಚಿಕೆ ಆಗಬೇಕು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24

‘ಜೆಡಿಎಸ್ ಎಲ್ಲರಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಬೇರೆ ಪಕ್ಷಗಳಲ್ಲಿ ಅನೇಕ ಪಟ್ಟಿಗಳಿವೆ. ಅವುಗಳ ಪಾಲಿಗೆ ಪಟ್ಟಿಗಳೆ ಫಜೀತಿ ಆಗಲಿವೆ. ಈಗಾಗಲೇ 123 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನ ಫೈನಲ್ ಮಾಡಿದ್ದು, ಅವರಿಗೆಲ್ಲ ಕೆಲಸ ಪ್ರಾರಂಭ ಮಾಡಲು ಹೇಳಿದ್ದೇನೆ. ನಾವು ಯಾವುದೇ ಪ್ರಚಾರ ಮಾಡದೇ ಕೆಲಸ ಪ್ರಾರಂಭ ಮಾಡಿದ್ದೇವೆ’ ಎಂದು ಕುಮಾರಸ್ವಾಮಿ ತಿಳಿಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago