ತುಮಕೂರು: ಕೋಟಿಗಟ್ಟಲೇ ಆಸ್ತಿ ಇದ್ದರೂ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರದ ಉಚಿತ ರೇಷನ್ ಪಡೆಯುತ್ತಿದ್ದ ಶಿರಾ ನಗರ ಸಭೆಯ ಜೆಡಿಎಸ್ ಸದಸ್ಯ ರವಿಶಂಕರ್ ಆಯ್ಕೆಯನ್ನು ಶಿರಾ ಜೆಎಂಎಫ್ಸಿ ನ್ಯಾಯಾಲಯ (JMFC Court) ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.
ಚೆಕ್ ಬೌನ್ಸ್, ಕೋಮು ಗಲಭೆ ಸೃಷ್ಟಿ, ಅಪಘಾತ ಪ್ರಕರಣಗಳು ರವಿಶಂಕರ್ ಮೇಲೆ ದಾಖಲಾಗಿತ್ತು. ನಾಮಪತ್ರ ಸಲ್ಲಿಸುವಾಗ ಅಭ್ಯರ್ಥಿಗಳು ತಮ್ಮ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳ ವಿವರಗಳನ್ನು ಅಫಿಡವಿಟ್ನಲ್ಲಿ ಉಲ್ಲೇಖಿಸದೇ ಕಾನೂನಿಗೆ ಮೋಸ ಮಾಡಿದ್ದರು ಎನ್ನುವ ಆರೋಪ ಕೇಳಿ ಬಂದಿತು. ಈ ನಡುವೆ ರವಿಶಂಕರ್ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ನಾಮಪತ್ರದಲ್ಲಿ ತನ್ನ ಬಳಿ 4 ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂದು ಹೇಳಿದ್ದರು ಕೂಡಬಿಪಿಎಲ್ ಕಾರ್ಡ್ ಪಡೆದು ಸರ್ಕಾರದ ಉಚಿತ ರೇಷನ್ ಪಡೆಯುತ್ತಿದ್ದರು.
ಈ ಬಗ್ಗೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣಪ್ಪ ಕೋರ್ಟ್ ಮೆಟ್ಟಿಲೇರಿ ಸುಳ್ಳು ಮಾಹಿತಿ ನೀಡಿರುವ ಬಗ್ಗೆ ನ್ಯಾಯಾಲಯದಲ್ಲಿ ಪ್ರಕರಣ ಹೂಡಿದ್ದರು, . 2021ರ ಡಿಸೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ರವಿಶಂಕರ್ ಸದಸ್ಯತ್ವ ಅನೂರ್ಜಿತಗೊಳಿಸಬೇಕು ಎಂದು ಮನವಿ ಮಾಡಿದ್ದರು, ವಾದ ವಿವಾದ ಆಲಿಸಿದ ಕೋರ್ಟ್ ಜೆಡಿಎಸ್(JDS) ಸದಸ್ಯ ರವಿಶಂಕರ್ ಆಯ್ಕೆಯನ್ನು ಅಸಿಂಧುಗೊಳಿಸಿ ಆದೇಶ ಹೊರಡಿಸಿದೆ.
ಬ್ರಿಟನ್ ರಾಣಿ ಎಲಿಜಬೆತ್ 2 ನಿಧನದ ಹಿನ್ನೆಲೆ.. ಸೆ.11ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ – Vishwanews24
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…