Featured

ಕೋಟಿ ಕಂಠ ಗಾಯನದಲ್ಲಿ ಉಡುಪಿ ಜಿಲ್ಲೆಯಿಂದ 5 ಲಕ್ಷ ಮಂದಿ ಭಾಗಿ : ಸಚಿವ ಸುನೀಲ್ ಕುಮಾರ್ – Vishwanews24

ಅ. 28 ರಂದು ವಿಶ್ವದಾದ್ಯಂತ ಕನ್ನಡದ ಕಂಪು..

ಏಕಕಾಲದಲ್ಲಿ 1 ಕೋಟಿ ಮಂದಿ ಹಾಡು ಹಾಡುತ್ತಿರುವುದು ದೇಶದ ಇತಿಹಾಸದಲ್ಲೇ ಮೊದಲು ..

ಕೋಟಿ ಕಂಠ ಗಾಯನದಲ್ಲಿ ಉಡುಪಿ ಜಿಲ್ಲೆಯಿಂದ 5 ಲಕ್ಷ ಮಂದಿ ಭಾಗಿ..

ಉಡುಪಿ : ಆಕ್ಟೋಬರ್ 28 ರಂದು ರಾಜ್ಯ ಸೇರಿದಂತೆ ವಿಶ್ವದ ಇತರೆ ಭಾಗದಲ್ಲಿರುವ 1 ಕೋಟಿಗೂ ಅಧಿಕ ಕನ್ನಡಿಗರಿಂದ ಕನ್ನಡದ ಹಿರಿಮೆ ಸಾರುವ ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ನಡೆಸಲು ಎಲ್ಲಾ ಅಗತ್ಯ ಸಿದ್ದತೆ ನಡೆಸಲಾಗುತ್ತಿದ್ದು, ಉಡುಪಿ ಜಿಲ್ಲೆಯಿಂದ 5 ಲಕ್ಷ ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದರೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೆಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಆಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಕ್ಟೋಬರ್ 28 ರಂದು ಬೆಳಗ್ಗೆ 11 ಗಂಟೆಗೆ ಏಕಕಾಲದಲ್ಲಿ ರಾಜ್ಯದ 10000 ಸ್ಥಳದಲ್ಲಿ ಗಾಯನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮ ದಲ್ಲಿ ಭಾಗವಹಿಸಲು ಸಾರ್ವಜನಿಕರು, ಸಂಘ ಸಂಸ್ಥೆಗಳು ಆಕ್ಟೊಬರ್ 20 ರ ಒಳಗೆ QR code ಮೂಲಕ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ತಿಳಿಸಿದರು.

ಮಂಗಳೂರು: ಜಾನುವಾರುಗಳಲ್ಲಿ ಚರ್ಮ ಗಂಟು ಕಾಯಿಲೆ.. ದ.ಕ. ಜಿಲ್ಲೆಗೆ 20,000 ಲಸಿಕೆ ಹಂಚಿಕೆ – Vishwanews24

ಕಾರ್ಯಕ್ರಮದಲ್ಲಿ ಮೊದಲಿಗೆ ನಾಡ ಗೀತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಬಾರಿಸು ಕನ್ನಡ ಡಿಂಡಿಮವ, ವಿಶ್ವ ವಿನೂತನ ವಿದ್ಯಾಚೇತನ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ಹಾಡಲಾಗುವುದು, ಈ ಹಾಡುಗಳನ್ನು ಹಾಡಲು ಅಗತ್ಯ ಪೂರ್ವ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದ ಸಚಿವರು, ರಾಜ್ಯದ 50 ಕಡೆ ಯೂನಿಕ್ ಕಾರ್ಯಕ್ರಮಗಳು ನಡೆಯಲಿದ್ದು , ಉಡುಪಿಯಲ್ಲಿ ಮಣಿಪಾಲದಲ್ಲಿ ಕೆ.ಎಂ.ಸಿ.ಯ 2500 ಮಂದಿ ವ್ಯದ್ಯರು ಮತ್ತು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ತಮ್ಮ ಬಿಳಿ ಸಮವಸ್ತçದಲ್ಲಿ ಸ್ಕೇತೋಸ್ಕೋಪ್ ಧರಿಸಿ ಗಾಯನ ಮಾಡಲಿದ್ದು ಹಾಗೂ ಮಲ್ಪೆ ಸಮುದ್ರದಲ್ಲಿ 5 ಬೋಟು ಗಳಲ್ಲಿ ಕಲಾವಿದರು, ಮೀನುಗಾರರು, ಸಾರ್ವಜನಿಕರಿಂದ ಗಾಯನ ಕಾರ್ಯಕ್ರಮ ನಡೆಸಲಾಗುವುದು ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಕನಿಷ್ಠ 5 ಲಕ್ಷ ಜನ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಸಿದ್ಧತೆ ಮಾಡಿಕೊಳ್ಳಬೇಕು, ಆಟೋ ಚಾಲಕರು, ಪೌರ ಕಾರ್ಮಿಕರು, ಗೇರು ಬೀಜ ಕಾರ್ಖಾನೆ ಸಿಬ್ಬಂದಿ, ಮೀನುಗಾರರು,ಶಾಲಾ ಕಾಲೇಜು ವಿದ್ಯಾರ್ಥಿಗಳು , ಸರಕಾರಿ ನೌಕರರು ಸೇರಿದಂತೆ ಸಾರ್ವಜನಿಕರು ಭಾಗವಹಿಸಬೇಕು ಎಂದರು.
ಶಾಲಾ ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಒಂದು ಪ್ರದೇಶದಲ್ಲಿ ಕನಿಷ್ಠ 100 ಮಂದಿ ಸೇರಿ ಹಾಡುಗಳನ್ನು ಹಾಡಬೇಕು , ಜಿಲ್ಲೆಯ ಸಹಕಾರಿ ಸಂಘಗಳು ಮತ್ತು ಅಲ್ಲಿನ ಸಿಬ್ಬಂದಿಗಳು, ಕಾರ್ಖಾನೆಗಳ ಸಿಬ್ಬಂದಿಗಳು,ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಮತ್ತು ನಗರಸ್ಥಳೀಯ ಸಂಸ್ಥೆಗಳಲ್ಲೂ ಸಹ ಎಲ್ಲಾ ಸಿಬ್ಬಂದಿ ಕಾರ್ಯಕ್ರಮದಲ್ಲಿl ಭಾಗವಹಿಸಬೇಕು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಈಗಾಗಲೇ ಈ ಕಾರ್ಯಕ್ರಮಕ್ಕೆ ಹೊರ ರಾಜ್ಯ ಮತ್ತು ಹೊರ ದೇಶದಲ್ಲಿರುವ ಕನ್ನಡಿಗರೂ ಸಹ ಸ್ಪಂದಿಸಿದ್ದು, ತಾವು ನೆಲೆಸಿರುವ ಪ್ರದೇಶದಿಂದಲೇ ಕನ್ನಡ ಗೀತೆಗಳನ್ನು ಹಾಡುವುದಾಗಿ ತಿಳಿಸಿದ್ದು, ಸೇನೆಯಲ್ಲಿರುವ ಕನ್ನಡಿಗ ಯೋಧರೂ ಸಹ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.
ಸಭೆಯಲ್ಲಿ ಭಾಗಹಿಸಿದ್ದ ವಿವಿಧ ಸಂಘಟನೆಗಳು ಮುಖಂಡರು ಈ ಕಾರ್ಯಕ್ರಮಕ್ಕೆ ತಮ್ಮ ಸಂಘದ ಸರ್ವ ಸದಸ್ಯರೊಂದಿಗೆ ಭಾಗವಹಿಸುವುದಾಗಿ ತಿಳಿಸಿದರು.

ಸುರತ್ಕಲ್ ಟೋಲ್ ಗೇಟ್ ತೆರವಿಗೆ ಉಡುಪಿ ಜಿಲ್ಲಾ ಜೆಡಿಎಸ್ ಬೆಂಬಲ – Vishwanews24

ಕೋಟಿಕಂಠ ಗಾಯನ ಕಾರ್ಯಕ್ರಮಕ್ಕೆ ನೊಂದಣಿ ಮಾಡಿಕೊಳ್ಳುವ ಪ್ರತಿಯೊಬ್ಬರಿಗೂ ಆನ್ ಲೈನ್ ಮೂಲಕ ಪ್ರಮಾಣಪತ್ರ ದೊರೆಯಲಿದೆ ಎಂದ ಸಚಿವರು ಕಾರ್ಯಕ್ರಮದಲ್ಲಿ ಯಾವುದೇ ಸಭಾ ಕಾರ್ಯಕ್ರಮ ಆಯೋಜನೆ ಇರುವುದಿಲ್ಲ, ಗಾಯನದ ಕೊನೆಯಲ್ಲಿ ಕನ್ನಡ ನಾಡು ನುಡಿಯ ಕುರಿತು ಸಂಕಲ್ಪ ಸ್ವೀಕರಿಸುವ ಕಾರ್ಯಕ್ರಮ ಮಾಡಬೇಕು ಎಂದರು.

ಸಭೆಯಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಜಿ.ಪಂ. ಸಿ ಇ ಓ ಪ್ರಸನ್ನ, ಅಪರ ಜಿಲ್ಲಾಧಿಕಾರಿ ವೀಣಾ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

22 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

23 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

23 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

23 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

23 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago