Featured

ಕೋಟಿ ಚೆನ್ನಯರ ಹೆಸರು ದುರುಪಯೋಗ, ಅನ್ಯ ಧರ್ಮದ ಅವಹೇಳನ :ಚೈತ್ರಾ ಕುಂದಾಪುರ ವಿರುದ್ದ ಶಿಸ್ತು ಕ್ರಮಕ್ಕೆ ಅಕ್ಷಿತ್‌ ಸುವರ್ಣ ಒತ್ತಾಯ – Vishwanews24

ಕೋಟಿ ಚೆನ್ನಯರ ಹೆಸರು ದುರುಪಯೋಗ, ಅನ್ಯ ಧರ್ಮದ ಅವಹೇಳನ :ಚೈತ್ರಾ ಕುಂದಾಪುರ ವಿರುದ್ದ ಶಿಸ್ತು ಕ್ರಮಕ್ಕೆ ಅಕ್ಷಿತ್‌ ಸುವರ್ಣ ಒತ್ತಾಯ – Vishwanews24

ಮಂಗಳೂರು: ಒಂದು ಸಮುದಾಯದ ವಿರುದ್ದ ಅಶ್ಲೀಲ, ಕಾನೂನುಬಾಹಿರ ಪದಗಳನ್ನು ಬಳಸಿ ಪ್ರಚೋದನಕಾರಿ ಭಾಷಣ ಮಾಡುವುದರ ಮೂಲಕ ಜಿಲ್ಲೆಯ ಶಾಂತಿ ಕದಡುವ ಕೆಲಸವನ್ನು ಮಾಡಿರುವ ಚೈತ್ರಾ ಕುಂದಾಪುರ ಅವರ ವಿರುದ್ದ ಇಲಾಖೆ ಕೂಡಲೇ ಶಿಸ್ತು ಕ್ರಮ ಕೈಗೊಳ್ಳುವಂತೆ ದಕ ಜಿಲ್ಲಾ ಯುವ ಜನತಾದಳ ಅಧ್ಯಕ್ಷ ಅಕ್ಷಿತ್‌ ಸುವರ್ಣ ಆಗ್ರಹಿಸಿದ್ದಾರೆ.

ಸದಾ ಶಾಂತಿಯನ್ನು ಬಯಸುವ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ಮೂರು ತಿಂಗಳಿನಿಂದ ನಿರಂತರವಾಗಿ ಕೋಮು ಭಾವನೆಯನ್ನು ಕೆರಳಿಸುವ ಕೆಲಸಗಳು ಕೆಲವೊಂದು ಸಂಘಟನೆಗಳ ಮೂಲಕ ನಡೆಯುತ್ತಿದೆ. ಇತ್ತೀಚೆಗೆ ಸುರತ್ಕಲ್‌ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಚೈತ್ರಾ ಕುಂದಾಪುರ ಎಂಬ ಯುವತಿ ತನ್ನ ಪ್ರಚೋದನಕಾರಿ ಭಾಷಣದ ಮೂಲಕ ಒಂದು ಧರ್ಮವನ್ನು ನಿಂದಿಸಿ ಈ ಮೂಲಕ ಶಾಂತಿ ಕದಡುವ ಕೆಲಸವನ್ನು ಕೈಗೊಂಡಿದ್ದಾರೆ. ಇಂತಹ ಕೋಮುಪ್ರಚೋದಕ ಭಾಷಣಗಳಿಂದಾಗಿ ಸಮಾಜದ ಸ್ವಾಸ್ಥವನ್ನು ಕದಡುವ, ಮತೀಯ ಘರ್ಷಣೆಗೆ ಕಾರಣವಾಗುವ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ.

ಚೈತ್ರಾ ಕುಂದಾಪುರ ಭಾಷಣದಲ್ಲಿ ಒಂದು ಕೋಮಿನ ಜನರನ್ನು ಕಾನೂನುಬಾಹಿರ ಪದಗಳನ್ನು ಬಳಸಿ ಅವಮಾನಿಸಿದ್ದಾರೆ. ಅಲ್ಲದೆ, ಆ ಕೋಮಿನ ವಿರುದ್ಧ ಜನತೆಯನ್ನು ಎತ್ತಿಕಟ್ಟುವ, ದ್ವೇಷ ಹುಟ್ಟಿಸುವ ರೀತಿಯಲ್ಲಿ ಉದ್ರೇಕಕಾರಿ ಪದಗಳನ್ನು ಬಳಸಿದ್ದಾರೆ. ಈಕೆಯ ಭಾಷಣದಿಂದ ಪ್ರಚೋದನೆಗೆ ಒಳಗಾಗಿ ಕ್ರಿಯೆ ಪ್ರಕ್ರಿಯೆಗಳು ಉಂಟಾಗುವ, ಕೋಮು ಘರ್ಷಣೆಯ ಭೀತಿ ಎದುರಾಗಿದ್ದು ಕೂಡಲೇ ನಗರ ಪೊಲೀಸ್‌ ಆಯುಕ್ತರು ಆಕೆಯ ವಿರುದ್ದ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧಿಸಬೇಕು.

ಸುರತ್ಕಲ್ ಪ್ರಚೋದನಕಾರಿ ಭಾಷಣ : ಚೈತ್ರಾ ಕುಂದಾಪುರ ವಿರುದ್ದ ದೂರು ದಾಖಲು – Vishwanews24

ಹಾಗೆಯೇ ಈಕೆಯ ಭಾಷಣದಲ್ಲಿ ತುಳುನಾಡಿನ ಕಾರಣಿಕ ಪುರಷರು, ಆರಾಧ್ಯ ದೈವಗಳಾದ ಕೋಟಿ ಚೆನ್ನಯರನ್ನು ದುರುಪಯೋಗ ಪಡಿಸಿ, ತುಳುವರ ಧಾರ್ಮಿಕ ನಂಬಿಕೆಗೆ ಘಾಸಿಯುಂಟು ಮಾಡಿದ್ದಾಳೆ. ಕೋಟಿ ಚೆನ್ನಯರು ಹಿಡಿಯುವ ಸುರಿಯ ಎಂಬ ಪವಿತ್ರ ಆಯುಧವನ್ನು ರೌಡಿಗಳು, ಕೋಮು ಘರ್ಷಣೆಯಲ್ಲಿ ಪುಂಡರು ಬಳಸುವ ತಲವಾರಿಗೆ ಹೋಲಿಸಿರುವುದು ಈಕೆಯ ಭಾಷಣದಲ್ಲಿ ದಾಖಲಾಗಿದೆ. ಇದು ಅತ್ಯಂತ ಆಘಾತಕಾರಿ, ಧಾರ್ಮಿಕ ನಂಬಿಕೆಗೆ ಘಾಸಿ ಉಂಟು ಮಾಡುವ ಪ್ರಯತ್ನವಾಗಿದೆ.

ಈ ವರೆಗೆ ಜಿಲ್ಲೆಯು ಶಾಂತಿಯುತವಾಗಿದ್ದು ಚುನಾವಣೆಗಳು ಬರುವಾಗ ಬಿಜೆಪಿ ಪಕ್ಷ ತನ್ನ ದಾಳವನ್ನು ಬೇಯಿಸಿಕೊಳ್ಳಲು ಇಂತಹ ಪ್ರಚೋದನಾಕಾರಿ ಭಾಷಣಗಳನ್ನು ನಡೆಸಲು ಅನುಮತಿ ನೀಡುವ ಕೆಲಸವನ್ನು ಮಾಡುತ್ತಿದೆ ಎಂಬ ಸಂಶಯ ಎದುರಾಗಿದ್ದು ಈ ಬಗ್ಗೆ ಕೂಡಲೇ ಜಿಲ್ಲೆಯ ಸಂಸದರು ಶಾಸಕರು ಉತ್ತರಿಸಬೇಕಿದೆ. ಅವರ ಈ ಮೌನ ಪರೋಕ್ಷವಾಗಿ ಜಿಲ್ಲೆಯಲ್ಲಿ ಕೋಮು ಘರ್ಷಣೆಗೆ ನೀಡುವಂತಿದೆ. ಕೋಟಿ ಚೆನ್ನಯ್ಯರ ಹೆಸರನ್ನು ದುರುಪಯೋಗಪಡಿಸಿಕೊಂಡಿರುವ ಚೈತ್ರಾ ಕುಂದಾಪುರ ಅವರ ವರ್ತನೆಯನ್ನು ಬಿಲ್ಲವ ಸಮುದಾಯ ಒಕ್ಕೊರಲಿನಿಂದ ಖಂಡಿಸಬೇಕಾಗಿದೆ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಇಂತಹ ವರ್ತನೆಗಳು ಮುಂದುವರೆಯಲು ಅವಕಾಶ ನೀಡಿದಂತಾಗುತ್ತದೆ.

ಬಿಜೆಪಿಗರಿಗೆ ಕಳೆದ ನಾಲ್ಕು ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಭಿವೃದ್ದಿ ಮರೆತು ಹೋಗಿದ್ದು ಚುನಾವಣೆಗೆ ಒಂದು ವರ್ಷ ಇರುವಾಗ ಇಂತಹ ವ್ಯಕ್ತಿಗಳ ಮೂಲಕ ಜನರನ್ನು ಪರಸ್ಪರ ಎತ್ತಿಕಟ್ಟುವ ಕೆಲಸ ಮಾಡುವುದು ಚೆನ್ನಾಗಿ ಅಭ್ಯಾಸವಾಗಿದೆ. ಜಿಲ್ಲೆಯಲ್ಲಿ ಕೋಮು ಸಂಘರ್ಷದ ಮೂಲಕ ಚುನಾವಣೆ ಗೆಲ್ಲಲು ಹೊರಟಿರುವುದು ಇದರಿಂದ ಸ್ಪಷ್ಟವಾದಂತಿದೆ. ಇಂತಹ ಕಟ್ಟದಾರಿಗಳನ್ನು ಬಿಟ್ಟು ನಿಜವಾದ ಅಭಿವೃದ್ಧಿಯನ್ನು ಮಾಡುವುದರ ಮೂಲಕ ಬಿಜೆಪಿ ಮಾಡಲಿ. ಇಂತಹ ಕೋಮು ಪ್ರಚೋದನೆಗೆ ಕಾರಣರಾದ ಚೈತ್ರಾ ಕುಂದಾಪುರ ಅವರ ವಿರುದ್ದ ಸರಕಾರ ಕೂಡಲೇ ಶಿಸ್ತುಕ್ರಮ ಕೈಗೊಳ್ಳಬೇಕು. ರಾಜ್ಯದ ಗೃಹಸಚಿವರು ಜಿಲ್ಲೆಯಲ್ಲಿ ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

19 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago