Featured

ಬೈಂದೂರು: ಕೋಟಿ ಚೆನ್ನಯ್ಯರ ಪರಂಪರೆ ಹಾಗೂ ಕಟ್ಟುಪಾಟುಗಳಿಗೆ ಅನುಗುಣವಾಗಿ ಗರಡಿ ನಿರ್ಮಾಣ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಬೈಂದೂರು: ಕೋಟಿ ಚೆನ್ನಯ್ಯರ ಪರಂಪರೆ ಹಾಗೂ ಕಟ್ಟುಪಾಟುಗಳಿಗೆ ಅನುಗುಣವಾಗಿ ಗರಡಿ ಜೀರ್ಣೋದ್ಧಾರಗೊಳ್ಳುತ್ತಿದೆ. ಕೋಟಿ ಚೆನ್ನಯ್ಯರ ಕೊನೆಯ ಗರಡಿ ಎನ್ನಲಾದ ನಾಕಟ್ಟೆಯ ಗರಡಿಯು ಸುಂದರವಾಗಿ, ಕಲಾತ್ಮಕವಾಗಿ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ ಎಂದು ರಾಜ್ಯ ಮುಜರಾಯಿ ಬಂದರು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಯಡ್ತರೆ ಗ್ರಾಮದ ನಾಕಟ್ಟೆಯಲ್ಲಿ ಜೀಣೋದ್ಧಾರಗೊಳ್ಳುತ್ತಿರುವ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಗೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ ವೀಕ್ಷಿಸಿದ ಬಳಿಕ ಮಾತನಾಡಿ ಗರಡಿ ಪೂರ್ಣಗೊಳ್ಳುವ ಹಂತದಲ್ಲಿರುವುದರಿಂದ ಸರಕಾರದಿಂದ ಶೀಘ್ರವಾಗಿ ಏನೇನು ಸಹಾಯ ಮಾಡಬಹುದು ಎಂಬುದನ್ನು ಅರಿತು ಮೊದಲ ಹಂತದಲ್ಲಿಯೇ ಪಟ್ಟಿಯಲ್ಲಿ ಸ್ವಲ್ಪ ಅನುದಾನ ಪ್ರಕಟಿಸಿ, ಹೆಚ್ಚಿನ ಬೇಡಿಕೆಯನ್ನು ರಾಜ್ಯ ಸರಕಾರದ ಮುಂದಿರಿಸುವ ಕೆಲಸ ಮಾಡಲಾಗುವುದು ಎಂದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಬಾಬು ಶೆಟ್ಟಿ ತಗ್ಗರ್ಸೆ, ಸುರೇಶ ಬಟವಾಡಿ, ತಾಲೂಕು ಪಂಚಾಯತ್ ಸದಸ್ಯರುಗಳಾದ ಪುಪ್ಪರಾಜ ಶೆಟ್ಟಿ, ಮಾಲಿನಿ ಕೆ., ಮಹೇಂದ್ರ ಪೂಜಾರಿ, ಬೈಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾಗೀರಥಿ, ಬೈಂದೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಗಣೇಶ ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ದೊಟ್ಟಯ್ಯ ಪೂಜಾರಿ, ಕಾರ್ಯದರ್ಶಿ ಕಿಶೋರ್ ಸಸಿಹಿತ್ಲು, ಸ್ಥಳೀಯರಾದ ಜಗನ್ನಾಥ ಶೆಟ್ಟಿ, ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು ಮೊದಲಾದವರು ಇದ್ದರು.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

16 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

16 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

17 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

17 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

17 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

17 hours ago