Featured

ಕೋಟಿ ಚೆನ್ನಯ್ಯ ಗರೋಡಿಗಳು ನಮ್ಮ ತುಳು ಸಂಸ್ಕೃತಿಯ ಪ್ರತೀಕವಾಗಿದೆ : ವಿನಯಕುಮಾರ್ ಸೊರಕೆ -Vishwanews24

ಬೈಂದೂರು: ಕೋಟಿ ಚೆನ್ನಯ್ಯ ಗರೋಡಿಗಳು ನಮ್ಮ ತುಳು ಸಂಸ್ಕೃತಿಯ ಪ್ರತೀಕವಾಗಿದೆ” ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಯಡ್ತರೆ ನಾಕಟ್ಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕೋಟಿ ಚೆನ್ನಯ್ಯ ಗರಡಿಗೆ ಭೇಟಿ, ಅದರ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

“ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತ್ಯ, ಧರ್ಮ, ನ್ಯಾಯಕ್ಕಾಗಿ ಹೋರಾಟ ಮಾಡಿದ ಕರಾವಳಿಯ ಅವಳಿ ವೀರಪುರಷರಾದ ಕೋಟಿ ಚೆನ್ನಯ್ಯರ 66 ಮೂಲ ಗರೋಡಿಗಳಿದೆ, ಅವುಗಳು ತಮ್ಮ ಪೂಜಾ ವಿಧಿವಿಧಾನದ ಮೂಲಕ ಇಂದಿಗೂ ತನ್ನ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಬಂದಿರುವುದಲ್ಲದೇ ಶ್ರೇಷ್ಠ ಆರಾಧನ ಕೇಂದ್ರಗಳಾಗಿ ಮಾರ್ಪಟ್ಟಿದೆ.  ಎಂದು  ಹೇಳಿದರು.

ನಿರ್ಮಾಣ ಹಂತದಲ್ಲಿರುವ ಗರಡಿಯು ಕಾಷ್ಠಶಿಲ್ಪದಿಂದ ಕಂಗೊಳಿಸುತ್ತಿದ್ದು, ಕೋಟಿ ಚೆನ್ನಯ್ಯ ಮೂಲ ಪರಿಕಲ್ಪನೆಗೆ ಚ್ಯುತಿ ಬಾರದಂತೆ, ಶಾಸ್ತ್ರೋಕ್ರವಾಗಿ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ. ಇದು ಕೋಟಿ ಚೆನ್ನಯ್ಯರ ಕೊನೆಯ ಗರೋಡಿಯಾಗಿದ್ದರೂ, ಎಲ್ಲಾ ಗರೋಡಿಗಳನ್ನು ಮೀರಿಸುವ ರೀತಿಯಲ್ಲಿ ನಿರ್ಮಾಣಗೊಳ್ಳುತ್ತಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭ ಖಂಬದಕೋಣೆ ರೈತರ ಸೇವಾ ಸಹಕಾರಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ಬಿ. ದೊಟ್ಟಯ್ಯ ಪೂಜಾರಿ, ಯಡ್ತರೆ ಗ್ರಾಪಂ ಉಪಾಧ್ಯಕ್ಷ ನಾಗರಾಜ ಗಾಣಿಗ, ಸದಸ್ಯ ಉಮೇಶ್, ಆನಂದ ಶೆಟ್ಟಿ, ಸ್ಥಳೀಯರಾದ ಎಸ್. ಮದನಕುಮಾರ್ ಉಪ್ಪುಂದ, ಜಗನ್ನಾಥ ಶೆಟ್ಟಿ, ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು – vishwanews24

ಮೈಸೂರು: ಮದುವೆ ನಿಶ್ಚಯವಾಗಿದ್ದ SBI ಉದ್ಯೋಗಿಗಳಿಬ್ಬರು ಆತ್ಮಹತ್ಯೆಗೆ ಶರಣು ಮೈಸೂರು: ಡಿಸೆಂಬರ್‌ನಲ್ಲಿ ಹಸೆಮಣೆ ಏರಬೇಕಿದ್ದ SBI ಉದ್ಯೋಗಿಗಳಿಬ್ಬರು ಪ್ರತ್ಯೇಕವಾಗಿ ಆತ್ಮಹತ್ಯೆಗೆ…

7 minutes ago

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ – vishwanews24

ಬಂಟ್ವಾಳ : ಅಡುಗೆ ಸಿಬ್ಬಂದಿಯನ್ನು ಪ್ರಾಣಾಪಾಯದಿಂದ ಕಾಪಾಡಿದ ವಿದ್ಯಾರ್ಥಿಗೆ ಸಿಎಂ ಮೆಚ್ಚುಗೆ ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು…

16 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಜಿಲ್ಲಾಡಳಿತದ ಕ್ರಮಕ್ಕೆ ಕಾಪು ಬಿಜೆಪಿ ತೀವ್ರ ಖಂಡನೆ – vishwanews24

ಸಂಘಪರಿವಾರದ ಪ್ರಮುಖರಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ಕ್ರಮ .. ನಿರ್ಬಂಧಗಳ ಮೂಲಕ ಸಂಘಪರಿವಾರದ ಮುಖಂಡರ ರಾಷ್ಟ್ರಭಕ್ತಿ ಮತ್ತು…

32 minutes ago

ಶಿರ್ವ ಡೇವಿಡ್‌ ಡಿ’ಸೋಜಾ ಕೊಲೆ ಪ್ರಕರಣಕ್ಕೆ ಶೀಘ್ರವೇ ತಾರ್ಕಿಕ ಅಂತ್ಯ – vishwanews24

ತಾರ್ಕಿಕ ಅಂತ್ಯ ಕಾಣಲಿರುವ ಶಿರ್ವ ಡೇವಿಡ್‌ ಡಿ'ಸೋಜಾ ಕೊಲೆ ಪ್ರಕರಣ ಹೊರ ರಾಜ್ಯದಲ್ಲಿ ಮಧ್ಯವರ್ತಿಯ ಹುಡುಕಾಟ ..  ಪೊಲೀಸರಿಂದ ಆರೋಪಿಗಳ…

45 minutes ago

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ – vishwanews24

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ ರೂ. 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಉಡುಪಿ:…

57 minutes ago

ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ – vishwanews24

ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ವಿಷ ಸೇವಿಸಿದ್ದ ಯುವತಿ.. ಪ್ರೇಯಸಿ ಆತ್ಮಹತ್ಯೆ ಸುದ್ದಿ ತಿಳಿದು ನೇಣಿಗೆ ಶರಣಾದ ಪ್ರಿಯಕರ ಧಾರವಾಡ: ಪ್ರೇಯಸಿ…

1 hour ago