Featured

ಕೋಟಿ ಚೆನ್ನಯ್ಯ ಗರೋಡಿಗಳು ನಮ್ಮ ತುಳು ಸಂಸ್ಕೃತಿಯ ಪ್ರತೀಕವಾಗಿದೆ : ವಿನಯಕುಮಾರ್ ಸೊರಕೆ -Vishwanews24

ಬೈಂದೂರು: ಕೋಟಿ ಚೆನ್ನಯ್ಯ ಗರೋಡಿಗಳು ನಮ್ಮ ತುಳು ಸಂಸ್ಕೃತಿಯ ಪ್ರತೀಕವಾಗಿದೆ” ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಯಡ್ತರೆ ನಾಕಟ್ಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕೋಟಿ ಚೆನ್ನಯ್ಯ ಗರಡಿಗೆ ಭೇಟಿ, ಅದರ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

“ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸತ್ಯ, ಧರ್ಮ, ನ್ಯಾಯಕ್ಕಾಗಿ ಹೋರಾಟ ಮಾಡಿದ ಕರಾವಳಿಯ ಅವಳಿ ವೀರಪುರಷರಾದ ಕೋಟಿ ಚೆನ್ನಯ್ಯರ 66 ಮೂಲ ಗರೋಡಿಗಳಿದೆ, ಅವುಗಳು ತಮ್ಮ ಪೂಜಾ ವಿಧಿವಿಧಾನದ ಮೂಲಕ ಇಂದಿಗೂ ತನ್ನ ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಬಂದಿರುವುದಲ್ಲದೇ ಶ್ರೇಷ್ಠ ಆರಾಧನ ಕೇಂದ್ರಗಳಾಗಿ ಮಾರ್ಪಟ್ಟಿದೆ.  ಎಂದು  ಹೇಳಿದರು.

ನಿರ್ಮಾಣ ಹಂತದಲ್ಲಿರುವ ಗರಡಿಯು ಕಾಷ್ಠಶಿಲ್ಪದಿಂದ ಕಂಗೊಳಿಸುತ್ತಿದ್ದು, ಕೋಟಿ ಚೆನ್ನಯ್ಯ ಮೂಲ ಪರಿಕಲ್ಪನೆಗೆ ಚ್ಯುತಿ ಬಾರದಂತೆ, ಶಾಸ್ತ್ರೋಕ್ರವಾಗಿ ನಿರ್ಮಾಣ ಮಾಡುತ್ತಿರುವುದು ಶ್ಲಾಘನೀಯ. ಇದು ಕೋಟಿ ಚೆನ್ನಯ್ಯರ ಕೊನೆಯ ಗರೋಡಿಯಾಗಿದ್ದರೂ, ಎಲ್ಲಾ ಗರೋಡಿಗಳನ್ನು ಮೀರಿಸುವ ರೀತಿಯಲ್ಲಿ ನಿರ್ಮಾಣಗೊಳ್ಳುತ್ತಿದೆ” ಎಂದು ಸಂತಸ ವ್ಯಕ್ತಪಡಿಸಿದರು.

ಈ ಸಂದರ್ಭ ಖಂಬದಕೋಣೆ ರೈತರ ಸೇವಾ ಸಹಕಾರಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಉಪ್ಪುಂದ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಮೋಹನ ಪೂಜಾರಿ, ಯಡ್ತರೆ ಬಿಲ್ಲವ ಸಂಘದ ಅಧ್ಯಕ್ಷ ಬಿ. ದೊಟ್ಟಯ್ಯ ಪೂಜಾರಿ, ಯಡ್ತರೆ ಗ್ರಾಪಂ ಉಪಾಧ್ಯಕ್ಷ ನಾಗರಾಜ ಗಾಣಿಗ, ಸದಸ್ಯ ಉಮೇಶ್, ಆನಂದ ಶೆಟ್ಟಿ, ಸ್ಥಳೀಯರಾದ ಎಸ್. ಮದನಕುಮಾರ್ ಉಪ್ಪುಂದ, ಜಗನ್ನಾಥ ಶೆಟ್ಟಿ, ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಉಪಾಧ್ಯಕ್ಷ ವೆಂಕಟ ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಅರ್ಚಕ ಕುಟುಂಬದ ಮಂಜುನಾಥ ಮೇಲ್ಹಿತ್ಲು ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

21 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

24 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

24 hours ago