Featured

ಕೋಟ ಅವಳಿ ಕೊಲೆ : ನ್ಯಾಯಕ್ಕಾಗಿ ದೇವರ ಮೊರೆ ; ಸಾಮೂಹಿಕ ಪ್ರಾರ್ಥನೆ ಹಾಗೂ ಹುಯಿಲು ಸೇವೆ – Vishwanews24

ಕುಂದಾಪುರ: ಕೋಟ ಮಣೂರಿನ ಚಿಕ್ಕಿನಕೆರೆ ಸಮೀಪ ಲೋಹಿತ್ ಪೂಜಾರಿಯ ಮನೆಯಂಗಳದಲ್ಲಿ ರೌಡಿ ಶೀಟರ್ ರಾಜಶೇಖರ ರೆಡ್ಡಿ ಮತ್ತು ಆತನ ತಂಡದವರಿಂದ ಕೊಲೆಯಾದ ಯತೀಶ್ ಕಾಂಚನ್ ಹಾಗೂ ಭರತ್ ಶ್ರೀಯಾನ್ರ ಹತ್ಯೆಗೈದವರಿಗೆ ಕಠಿಣ ಶಿಕ್ಷೆ ಕೋರಿ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ಹಾಗೂ ಮಾರಣಕಟ್ಟೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಸಂಕ್ರಾತಿ ದಿನದ ಅಂಗವಾಗಿ ಕೋಟದ ನಾಗರೀಕರು ಸೇರಿದಂತೆ ಮೃತರ ಕುಟುಂಬಿಕರು ಸಾಮೂಹಿಕ ಪ್ರಾರ್ಥನೆ ಹಾಗೂ ಹುಯಿಲು ಸೇವೆಯನ್ನು ನೀಡಿದ್ದಾರೆ.

ಕಳೆದ ಹಲವು ದಿನಗಳ ಹಿಂದೆ ಇದೇ ವಿಚಾರವಾಗಿ ಕೋಟ ಬಸ್ಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾ ನಿರತರು ಸಾಮೂಹಿಕ ಪ್ರಾರ್ಥನೆ ಹಾಗೂ ಸಂಕ್ರಾತಿ ದಿನದಂದು ಹುಯಿಲು ಸೇವೆ ನೀಡುವುದಾಗಿ ಘೋಷಿಸಿದ್ದರು ಅದರಂತೆ ಬುಧವಾರ ದೇವಳದಲ್ಲಿ ಸಾಮೂಹಿಕ ಪ್ರಾರ್ಥನೆ ಹುಯಿಲು ಸೇವೆ ನಡೆಯಿತು.

ಕೋಟದ ನಾಗರೀಕರು ಸೇರಿದಂತೆ ಹತ್ಯೆಯಾದ ಕುಟುಂಬಿಕರು ದೇವರಲ್ಲಿ ಪ್ರಾರ್ಥಿಸಿ ನಿನ್ನ ಸನ್ನಿಧಾನದಲ್ಲಿ ಈ ರೀತಿಯ ಎರಡು ಕೊಲೆಗಳಾಗಿವೆ ಇಂಥಹ ಕೃತ್ಯಗಳಿಗೆ ನಿನ್ನ ಸಾನಿಧ್ಯದಲ್ಲಿ ಎಡೆ ಉಂಟೆ ಎಂದು ಕೇಳಿದಾಕ್ಷಣ ಶ್ರೀ ದೇವರ ನುಡಿಯಂತೆ ನನ್ನ ಸನ್ನಿಧಾನದಲ್ಲಿ ಈ ರೀತಿಯ ಕೃತ್ಯ ಎಸಗಿದ ರಾಕ್ಷಸರಿಗೆ ಖಂಡಿತವಾಗಿಯೂ ಬಿಡಲಾರೆ ತನ್ನ ಮಖದ ಛಾಯೇಗೆ ರಕ್ತದೋಕುಳಿ ಹರಿಸಿದವರ ಮಗ್ಗಲು ಮುರಿಯಲು ಈ ಹಂತದಲ್ಲೆ ಗಣಗಳನ್ನು ಬಿಟ್ಟಿದ್ದೇನೆ ಇದಕ್ಕೆಲ್ಲ ನ್ಯಾಯ ದೊರಕಿಸುತ್ತೇನೆ ಎಂದು ನುಡಿಯಿತ್ತಿತು. ಮಾರಣಕಟ್ಟೆಯ ಬ್ರಹ್ಮಲಿಂಗೇಶ್ವರನಲ್ಲೂ ಇದೇ ರೀತಿ ದೇವರಲ್ಲಿ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಊರಿನ ಹಲವು ಗ್ರಾಮಸ್ಥರು ಉಪಸ್ಥಿತರಿದ್ದರು.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago