ಉಡುಪಿ, : ಫೆಬ್ರವರಿ 07 ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಡಿಕೇರಿಯಲ್ಲಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧಾರಿಸಿ ಮಡಿಕೇರಿಯಲ್ಲಿ ಅವಿತುಕೊಂಡಿದ್ದ ಇಬ್ಬರು ಆರೋಪಿಗಳಾದ ರಾಜಶೇಖರ ರೆಡ್ಡಿ ಮತ್ತು ರವಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 27 ರಂದು ಕೋಟದಲ್ಲಿ ಭರತ್ ಮತ್ತು ಯತೀಶ್ ಎಂಬ ಇಬ್ಬರ ಕೊಲೆಯಾಗಿತ್ತು.
ಈ ನಡುವೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಹರೀಶ್ ರೆಡ್ಡಿ ಸಹೋದರ ರಾಜಶೇಖರ ರೆಡ್ಡಿ ಹಾಗೂ ತಲ್ಲೂರು ನಿವಾಸಿ ರವಿ ಯಾನೆ ಮೆಡಿಕಲ್ ರವಿ ಎಂಬಾತನನ್ನು ಪೊಲೀಸರು ಗುರುವಾರ ಮಡಿಕೇರಿಯಿಂದ ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇನ್ನು ಪ್ರಮುಖ ಆರೋಪಿ ಹರೀಶ್ ರೆಡ್ಡಿ ಬಂಧನ ಬಾಕಿಯಿದೆ ಎಂದು ಹೇಳಲಾಗುತ್ತಿದೆ.
ಉಳಿದಂತೆ ಇನ್ನೂ ಆರು ಆರೋಪಿಗಳ ಬಂಧನ ಬಾಕಿ ಇದ್ದು ಶೀಘ್ರವೇ ಬಂಧಿಸುವ ಭರವಸೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಟಾಯ್ಲೆಟ್ ಪಿಟ್ ವಿಚಾರದಲ್ಲಿ ಕೊಲೆ ನಡೆದಿತ್ತು ಎಂದು ಅಂದು ಮೇಲ್ನೋಟಕ್ಕೆ ತಿಳಿದು ಬಂದಿದ್ದರಿಂದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಕೊಲೆಗೆ ಅನ್ಯ ಕಾರಣ ಇದೆ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಉಳಿದಂತೆ ಪ್ರಮುಖ ಆರೋಪಿ ಹರೀಶ್ ರೆಡ್ಡಿ ಬಂಧನ ಬಾಕಿ ಇದೆ. ಶೀಘ್ರವೇ ಬಂಧಿಸುವ ಭರವಸೆಯನ್ನು ಪೊಲಿಸರು ವ್ಯಕ್ತಪಡಿಸಿದ್ದಾರೆ.
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…