ಉಡುಪಿ, : ಫೆಬ್ರವರಿ 07 ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಡಿಕೇರಿಯಲ್ಲಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧಾರಿಸಿ ಮಡಿಕೇರಿಯಲ್ಲಿ ಅವಿತುಕೊಂಡಿದ್ದ ಇಬ್ಬರು ಆರೋಪಿಗಳಾದ ರಾಜಶೇಖರ ರೆಡ್ಡಿ ಮತ್ತು ರವಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 27 ರಂದು ಕೋಟದಲ್ಲಿ ಭರತ್ ಮತ್ತು ಯತೀಶ್ ಎಂಬ ಇಬ್ಬರ ಕೊಲೆಯಾಗಿತ್ತು.
ಈ ನಡುವೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಹರೀಶ್ ರೆಡ್ಡಿ ಸಹೋದರ ರಾಜಶೇಖರ ರೆಡ್ಡಿ ಹಾಗೂ ತಲ್ಲೂರು ನಿವಾಸಿ ರವಿ ಯಾನೆ ಮೆಡಿಕಲ್ ರವಿ ಎಂಬಾತನನ್ನು ಪೊಲೀಸರು ಗುರುವಾರ ಮಡಿಕೇರಿಯಿಂದ ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇನ್ನು ಪ್ರಮುಖ ಆರೋಪಿ ಹರೀಶ್ ರೆಡ್ಡಿ ಬಂಧನ ಬಾಕಿಯಿದೆ ಎಂದು ಹೇಳಲಾಗುತ್ತಿದೆ.
ಉಳಿದಂತೆ ಇನ್ನೂ ಆರು ಆರೋಪಿಗಳ ಬಂಧನ ಬಾಕಿ ಇದ್ದು ಶೀಘ್ರವೇ ಬಂಧಿಸುವ ಭರವಸೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಟಾಯ್ಲೆಟ್ ಪಿಟ್ ವಿಚಾರದಲ್ಲಿ ಕೊಲೆ ನಡೆದಿತ್ತು ಎಂದು ಅಂದು ಮೇಲ್ನೋಟಕ್ಕೆ ತಿಳಿದು ಬಂದಿದ್ದರಿಂದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಕೊಲೆಗೆ ಅನ್ಯ ಕಾರಣ ಇದೆ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಉಳಿದಂತೆ ಪ್ರಮುಖ ಆರೋಪಿ ಹರೀಶ್ ರೆಡ್ಡಿ ಬಂಧನ ಬಾಕಿ ಇದೆ. ಶೀಘ್ರವೇ ಬಂಧಿಸುವ ಭರವಸೆಯನ್ನು ಪೊಲಿಸರು ವ್ಯಕ್ತಪಡಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…