ಉಡುಪಿ, : ಫೆಬ್ರವರಿ 07 ಉಡುಪಿ ಜಿಲ್ಲೆಯ ಕೋಟದಲ್ಲಿ ನಡೆದ ಡಬ್ಬಲ್ ಮರ್ಡರ್ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮಡಿಕೇರಿಯಲ್ಲಿ ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧಾರಿಸಿ ಮಡಿಕೇರಿಯಲ್ಲಿ ಅವಿತುಕೊಂಡಿದ್ದ ಇಬ್ಬರು ಆರೋಪಿಗಳಾದ ರಾಜಶೇಖರ ರೆಡ್ಡಿ ಮತ್ತು ರವಿಯನ್ನು ಪೊಲೀಸರು ಬಂಧಿಸಿದ್ದಾರೆ.
ಜನವರಿ 27 ರಂದು ಕೋಟದಲ್ಲಿ ಭರತ್ ಮತ್ತು ಯತೀಶ್ ಎಂಬ ಇಬ್ಬರ ಕೊಲೆಯಾಗಿತ್ತು.
ಈ ನಡುವೆ ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಹರೀಶ್ ರೆಡ್ಡಿ ಸಹೋದರ ರಾಜಶೇಖರ ರೆಡ್ಡಿ ಹಾಗೂ ತಲ್ಲೂರು ನಿವಾಸಿ ರವಿ ಯಾನೆ ಮೆಡಿಕಲ್ ರವಿ ಎಂಬಾತನನ್ನು ಪೊಲೀಸರು ಗುರುವಾರ ಮಡಿಕೇರಿಯಿಂದ ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇನ್ನು ಪ್ರಮುಖ ಆರೋಪಿ ಹರೀಶ್ ರೆಡ್ಡಿ ಬಂಧನ ಬಾಕಿಯಿದೆ ಎಂದು ಹೇಳಲಾಗುತ್ತಿದೆ.
ಉಳಿದಂತೆ ಇನ್ನೂ ಆರು ಆರೋಪಿಗಳ ಬಂಧನ ಬಾಕಿ ಇದ್ದು ಶೀಘ್ರವೇ ಬಂಧಿಸುವ ಭರವಸೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಟಾಯ್ಲೆಟ್ ಪಿಟ್ ವಿಚಾರದಲ್ಲಿ ಕೊಲೆ ನಡೆದಿತ್ತು ಎಂದು ಅಂದು ಮೇಲ್ನೋಟಕ್ಕೆ ತಿಳಿದು ಬಂದಿದ್ದರಿಂದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಕೊಲೆಗೆ ಅನ್ಯ ಕಾರಣ ಇದೆ ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
ಇನ್ನು ಉಳಿದಂತೆ ಪ್ರಮುಖ ಆರೋಪಿ ಹರೀಶ್ ರೆಡ್ಡಿ ಬಂಧನ ಬಾಕಿ ಇದೆ. ಶೀಘ್ರವೇ ಬಂಧಿಸುವ ಭರವಸೆಯನ್ನು ಪೊಲಿಸರು ವ್ಯಕ್ತಪಡಿಸಿದ್ದಾರೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…