ಕೋಟ, : ಕೋಟದ ಗ್ರಾಮೀಣ ಭಾಗದಲ್ಲಿ ಕಳೆದ 24ವರ್ಷಗಳಿಂದ ತನ್ನ ಸಾಮಾಜಿಕ, ಕಲಾರಾಧನೆ, ಭಾಷಾಭಿಮಾನದ ನಡುವೆ ತನ್ನ ಸೇವೆಯನ್ನು ನಿರಂತರವಾಗಿ ನೀಡುತ್ತಾ ಬಂದಿರುವ ಕೋಟದ ಪಂಚವರ್ಣ ಯುವಕ ಮಂಡಲ ಪ್ರತಿವರ್ಷ ನವೆಂಬರ್ 1ರಂದು ಕೋಟದ ವರುಣತೀರ್ಥ ಕೆರೆ ಸಮೀಪ ಕನ್ನಡರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ತನ್ನ ಸಂಸ್ಥೆಯ ಮೂಲಕ ಸಾಧಕನ್ನು ಗುರುತಿಸಿ ಪ್ರಶಸ್ತಿ ನೀಡುವ ಕಾರ್ಯಕ್ರಮಗಳ ನಡುವೆ ವಿವಿಧ ಸಾಂಸ್ಕೃತಿಕ ,ಆಶಕ್ತ ,ಆನಾರೋಗ್ಯ ಪೀಡಿತ ಕುಟುಂಬಗಳಿಗೆ ಸಹಾಯಹಸ್ತ, ಪ್ರತಿಭಾ ಪುರಸ್ಕಾರ, ಹೀಗೆ ನಾನಾ ರೀತಿಯ ವಿಶಿಷ್ಟ ಕಾರ್ಯಕ್ರಮಗಳಿಂದ ಮನೆಮಾತಾಗಿ ಬೆಳೆದಿದೆ.
ಈ ನಡುವೆ ಈ ಬಾರಿಯ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಅನಾರೋಗ್ಯ ಪೀಡಿತರ ಆಶಾಕಿರಣ, ಸಮಾಜ ಸೇವಕ ರವಿ ಕಟಪಾಡಿ ಇವರನ್ನು ಆಯ್ಕೆಗೊಳಿಸಲಾಗಿದೆ. ಇದೇ ಬರುವ ನವೆಂಬರ್ 1ರಂದು ಕೋಟದ ವರುಣತೀರ್ಥಕೆರೆ ಸಮೀಪ ಅಮೃತೇಶ್ವರಿ ದೇವಳದ ಪಾರ್ಕಿಂಗ್ ಸ್ಥಳದಲ್ಲಿ ಪ್ರಶಸ್ತಿ ಪ್ರದಾನಸಮಾರಂಭ ನಡೆಯಲಿದ್ದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರದಾನಮಾಡಲಿದ್ದಾರೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಾವರ: ಜಾರುಕುದ್ರು ಸೇತುವೆ ಶೀಘ್ರ ಉದ್ಘಾಟನೆ :ಶಾಸಕ ಲಾಲಾಜಿ ಮೆಂಡನ್ – Vishwanews24
ಶಿರ್ವ: ಪಾಪನಾಶಿನಿ ಹೊಳೆಯಲ್ಲಿ ಹಸುವಿನ ಅವಶೇಷ ಪತ್ತೆ; ಪ್ರಕರಣ ದಾಖಲು ಶಿರ್ವ: ಕಾಪು ತಾಲೂಕಿನ ಶಿರ್ವ ಗ್ರಾಮದ ಕಲ್ಲೊಟ್ಟು ಸೇತುವೆ…
ಬೈಂದೂರು: ಶಿರೂರು ನದಿಯಲ್ಲಿ ಈಜಲು ತೆರಳಿದ್ದ ಹಾವೇರಿ ಮೂಲದ ವಿದ್ಯಾರ್ಥಿ ನೀರುಪಾಲು ಬೈಂದೂರು : ಕುಟುಂಬದವರೊಂದಿಗೆ ಪ್ರವಾಸಕ್ಕೆ ಬಂದಿದ್ದ ಹಾವೇರಿ…
ಉಡುಪಿ: ಡಿಕೆಶಿ ಸಂಪುಟದಲ್ಲಿ ಜಾರ್ಜ್ ಗೆ ಉಪ ಮುಖ್ಯಮಂತ್ರಿ, ಐವನ್ ಗೆ ಸಚಿವ ಸ್ಥಾನ ನೀಡಲು ಕಥೊಲಿಕ್ ಸಭಾ ಆಗ್ರಹ…
ಮಲೇಷ್ಯಾದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ಬಳಕೆ ನಿಷೇಧ.. ನಿಯಮ ಉಲ್ಲಂಘಸಿದ್ರೆ 23.95 ಕೋಟಿ ರೂ. ದಂಡ ಕೌಲಾಲಂಪುರ್: 16…
ಸುವೇಂಧು ಸಂಪುಟ ವಿಸ್ತರಣೆ: ಬಂಗಾಳದ ನೂತನ ಸಚಿವರಾಗಿ 35 ಶಾಸಕರಿಂದ ಪ್ರಮಾಣ ಸ್ವೀಕಾರ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು…
ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…