ಕೋಟ, : ಕೋಟದ ಗ್ರಾಮೀಣ ಭಾಗದಲ್ಲಿ ಕಳೆದ 24ವರ್ಷಗಳಿಂದ ತನ್ನ ಸಾಮಾಜಿಕ, ಕಲಾರಾಧನೆ, ಭಾಷಾಭಿಮಾನದ ನಡುವೆ ತನ್ನ ಸೇವೆಯನ್ನು ನಿರಂತರವಾಗಿ ನೀಡುತ್ತಾ ಬಂದಿರುವ ಕೋಟದ ಪಂಚವರ್ಣ ಯುವಕ ಮಂಡಲ ಪ್ರತಿವರ್ಷ ನವೆಂಬರ್ 1ರಂದು ಕೋಟದ ವರುಣತೀರ್ಥ ಕೆರೆ ಸಮೀಪ ಕನ್ನಡರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದೆ. ತನ್ನ ಸಂಸ್ಥೆಯ ಮೂಲಕ ಸಾಧಕನ್ನು ಗುರುತಿಸಿ ಪ್ರಶಸ್ತಿ ನೀಡುವ ಕಾರ್ಯಕ್ರಮಗಳ ನಡುವೆ ವಿವಿಧ ಸಾಂಸ್ಕೃತಿಕ ,ಆಶಕ್ತ ,ಆನಾರೋಗ್ಯ ಪೀಡಿತ ಕುಟುಂಬಗಳಿಗೆ ಸಹಾಯಹಸ್ತ, ಪ್ರತಿಭಾ ಪುರಸ್ಕಾರ, ಹೀಗೆ ನಾನಾ ರೀತಿಯ ವಿಶಿಷ್ಟ ಕಾರ್ಯಕ್ರಮಗಳಿಂದ ಮನೆಮಾತಾಗಿ ಬೆಳೆದಿದೆ.
ಈ ನಡುವೆ ಈ ಬಾರಿಯ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಗೆ ಅನಾರೋಗ್ಯ ಪೀಡಿತರ ಆಶಾಕಿರಣ, ಸಮಾಜ ಸೇವಕ ರವಿ ಕಟಪಾಡಿ ಇವರನ್ನು ಆಯ್ಕೆಗೊಳಿಸಲಾಗಿದೆ. ಇದೇ ಬರುವ ನವೆಂಬರ್ 1ರಂದು ಕೋಟದ ವರುಣತೀರ್ಥಕೆರೆ ಸಮೀಪ ಅಮೃತೇಶ್ವರಿ ದೇವಳದ ಪಾರ್ಕಿಂಗ್ ಸ್ಥಳದಲ್ಲಿ ಪ್ರಶಸ್ತಿ ಪ್ರದಾನಸಮಾರಂಭ ನಡೆಯಲಿದ್ದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರದಾನಮಾಡಲಿದ್ದಾರೆ ಎಂದು ಸಂಘಟಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಾವರ: ಜಾರುಕುದ್ರು ಸೇತುವೆ ಶೀಘ್ರ ಉದ್ಘಾಟನೆ :ಶಾಸಕ ಲಾಲಾಜಿ ಮೆಂಡನ್ – Vishwanews24
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…