ಕೋಟ: ನವ ವಿವಾಹಿತೆಯೋರ್ವಳು ಮದುವೆಯಾಗಿ ಎರಡೇ ತಿಂಗಳಲ್ಲಿ ಗಂಡನ ಮನೆಯಿಂದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾಳೆ ಎಂಬ ಆರೋಪದಲ್ಲಿ ನ್ಯಾಯಾಲಯದ ಆದೇಶದಂತೆ ಪ್ರಕರಣ ದಾಖಲಾದ ಘಟನೆ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಸಾಲಿಗ್ರಾಮದಲ್ಲಿ ನಡೆದಿದೆ.
ಸಾಲಿಗ್ರಾಮದ ಅಂತೋನಿ ಡಾಲ್ವಿನ್ ಕಾರ್ಡೋಜಾ ಅವರ ಕುಟುಂಬವು ಚಿನ್ನಾಭರಣ ಕಳೆದುಕೊಂಡಿದ್ದು, ಹಾಸನ ಮೂಲದ ಅನುಷಾ ಆರೋಪಿ.
ಅಂತೋನಿ ಡಾಲ್ವಿನ್ಗೆ ಅನುಷಾ ಜತೆಗೆ 2023 ಡಿ.26ರಂದು ಸಾಸ್ತಾನದ ಸೈಂಟ್ ಅಂತೋನಿ ಚರ್ಚ್ನಲ್ಲಿ ನೆರವೇರಿತ್ತು 2024ರ ಫೆ.9ರಂದು ಅನುಷಾ ತನ್ನ ತಾಯಿಗೆ ಆರೋಗ್ಯ ಸಮಸ್ಯೆ ಇದ್ದು, ಮನೆಗೆ ಹೋಗಿ ನಾಲ್ಕು ದಿನಗಳಲ್ಲಿ ಮರಳುತ್ತೇನೆ ಎಂದು ಹೇಳಿ ಹೋಗಿದ್ದಳು. ಆದರೆ ಸಂಜೆ ಮನೆಯ ಕಪಾಟನ್ನು ನೋಡಿದಾಗ ಅಂತೋನಿ ಅವರ ತಾಯಿಯ 40 ಗ್ರಾಂ ತೂಕದ ಕರಿಮಣಿ, 10 ಗ್ರಾಂ ತೂಕದ 4 ಚಿನ್ನದ ಬಳೆಗಳು, 24 ಗ್ರಾಂ ಚಿನ್ನದ ಸರ, 3 ಚಿನ್ನದ ಉಂಗುರಗಳು, ಮತ್ತು ಕಿವಿ ಓಲೆ ಕಾಣೆಯಾಗಿರುವುದು ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಅನುಷಾಳನ್ನು ಕೇಳಿದಾಗ ತಪ್ಪೊಪ್ಪಿಕೊಂಡ ಆಕೆ, ಮನೆಗೆ ವಾಪಸ್ ಬಂದಾಗಿ ನೀಡುವುದಾಗಿ ತಿಳಿಸಿದ್ದಳು. ಹೀಗಾಗಿ ಪ್ರಕರಣವನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಪ್ರಯತ್ನಿಸಲಾಗಿತ್ತು.
ಆದರೆ ಆರೋಪಿ ಅನುಷಾ ಚಿನ್ನಾಭರಣವನ್ನು ವಾಪಸ್ ನೀಡದೆ, ಮನೆಗೂ ಮರಳದೆ ಸತಾಯಿಸುತ್ತಿದ್ದಾಳೆ. ಚಿನ್ನಾಭರಣ ನೀಡಬೇಕಿದ್ದರೆ 25 ಲ. ರೂ. ನೀಡಬೇಕೆಂಬ ಬೇಡಿಕೆ ಈಡುತ್ತಿದ್ದಾಳೆ. ಹೀಗಾಗಿ ಆಕೆಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಂತೋನಿ ಕುಂದಾಪುರ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…