ಕೋಟ : ಪಾರಂಪಳ್ಳಿ ಪಡುಕರೆಯಲ್ಲಿ ಕಡಲ ಕಿನಾರೆಯಲ್ಲಿ ಮೀನುಗಾರಿಕೆ ತೆರಳಿದ ಸಂದರ್ಭದಲ್ಲಿ ದೋಣಿ ಮಗುಚಿ ಓರ್ವ ಸಾವಿಗಿಡಾಗಿ ಇರ್ವರು ಪಾರಾದ ಘಟನೆ ಶುಕ್ರಮವಾರ ನಡೆದಿದೆ.
ಸಾವಿಗಿಡಾದ ಮೀನುಗಾರ ಪಾರಂಪಳ್ಳಿ ನಿವಾಸಿ ಸುಮಂತ್ ಮೊಗವೀರ ವ.23 ಎಂದು ಗುರುತಿಸಲಾಗಿದೆ.
ಶುಕ್ರವಾರ ಪೂರ್ವಾಹ್ನ 11.ಗ ಸ್ಥಳೀಯರಾದ ಸಂದೀಪ್, ಪ್ರಜ್ವಲ್ ಹಾಗೂ ಸುಮಂತ್ ಮೂವರು ಮೀನುಗಾರಿಕೆ ತೆರಳಲು ನಾಡದೋಣಿಯ ಮೂಲಕ ಸಮುದ್ರಕ್ಕೆ ತೆರಳಿದರು ಎನ್ನಲಾಗಿದ್ದು ಸಮುದ್ರದಲ್ಲಿ ಈ ವೇಳೆ ಸಮುದ್ರದ ಬಾರಿ ಗಾತ್ರದ ಅಲೆಗೆ ಸಿಲುಕಿ ದೋಣಿಯಲ್ಲಿದ್ದ ಈ ಮೂವರು ಮುಗುಚಿ ಬಿದ್ದಿದ್ದು, ಇಬ್ಬರು ಸಂದೀಪ್ ಮತ್ತು ಪ್ರಜ್ವಲ್ ಈಜಿ ದಡ ಸೇರಿದ್ದಾರೆ ಎನ್ನಲಾಗಿದೆ.ಆದರೆ ಮೃತ ಸುಮಂತ್ ಗೆ ಸಮುದ್ರದ ಬಾರಿ ಗಾತ್ರದ ಅಲೆಗಳ ನಡುವೆ ಈಜಿದರೂ ಪ್ರಯೋಜನ ಬಾರದೆ ಸಮುದ್ರದ ಅಲೆಗಳೊಂದಿಗೆ ಕೊಚ್ಚಿ ಹೋಗಿದ್ದಾರೆ.
ಇನ್ನು ಅಲ್ಲಿ ಸಮೀಪ ಮೀನುಗಾರಿಕೆ ನಡೆಸುತ್ತಿದ್ದ ಸ್ಥಳೀಯರು ಬಲೆ ಬಿಸಿ ಸುಮಂತ್ ನನ್ನು ಮೇಲೆ ಎಳೆದಿದ್ದು ತಕ್ಷಣ ಅವರನ್ನು ಜೀವನ್ ಮಿತ್ರ ಆ್ಯಂಬುಲೇನ್ಸ್ ಮೂಲಕ ಆಸ್ಪತ್ರೆಗೆ ಸ್ಥಳಾಂತರಿಸಿದ್ದು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…