ಉಡುಪಿ : ನಿನ್ನೆ ರಾತ್ರಿ ಸಿಡಿಲು ಬಡಿದು ಸಾಫ್ಟವೇರ್ ಇಂಜಿನಿಯರ್ ಒಬ್ಬ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕೋಟದ ವಂಡಾರಿನ ಬೋರ್ಡ್ ಕಲ್ಲಿನಲ್ಲಿ ನಿನ್ನೆ ಸಂಭವಿಸಿದೆ.
ಮೃತ ಯುವಕನನ್ನು ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಎಂದು ಗುರುತಿಸಲಾಗಿದ್ದು, ಮನೆಯೊಳಗಡೆ ಲ್ಯಾಪ್ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲು ಹೊಡೆದಿದೆ. ಸಿಡಿಲಿನ ಹೊಡೆತಕ್ಕೆ ಗಂಭೀರವಾಗಿ ಅಸ್ವಸ್ಥತಗೊಂಡಿದ್ದು ಚೇತನ್ ನ್ನು ತತ್ ಕ್ಷಣ ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಗೆ ಕರೆದೊಯ್ಯಲಾಯಿತು. ಆದರೆ ಅಷ್ಟರೊಳಗೆ ಚೇತನ್ ಮೃತಪಟ್ಟಿದ್ದರು.
ಚೇತನ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯ ಉದ್ಯೋಗಿಯಾಗಿದ್ದು ಕೊರೊನಾ ಲಾಕ್ ಡೌನ್ ನಂತರ ಹಲವು ತಿಂಗಳಿಂದ ಮನೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದ. ಈತನದ್ದು ತೀರಾ ಬಡತನದ ಕುಟುಂಬವಾಗಿದ್ದು ಸಾಕಷ್ಟು ಕಷ್ಟಪಟ್ಟು ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಹಾಗೂ ಮನೆಗೆ ಆಧಾರವಾಗಿದ್ದ. ಮೃತನು ತಂದೆ,ತಾಯಿ, ಸಹೋದರಿಯನ್ನು ಅಗಲಿದ್ದಾನೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…