ಉಡುಪಿ : ನಿನ್ನೆ ರಾತ್ರಿ ಸಿಡಿಲು ಬಡಿದು ಸಾಫ್ಟವೇರ್ ಇಂಜಿನಿಯರ್ ಒಬ್ಬ ಸಾವನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕೋಟದ ವಂಡಾರಿನ ಬೋರ್ಡ್ ಕಲ್ಲಿನಲ್ಲಿ ನಿನ್ನೆ ಸಂಭವಿಸಿದೆ.
ಮೃತ ಯುವಕನನ್ನು ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಎಂದು ಗುರುತಿಸಲಾಗಿದ್ದು, ಮನೆಯೊಳಗಡೆ ಲ್ಯಾಪ್ಟಾಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಂದರ್ಭ ಸಿಡಿಲು ಹೊಡೆದಿದೆ. ಸಿಡಿಲಿನ ಹೊಡೆತಕ್ಕೆ ಗಂಭೀರವಾಗಿ ಅಸ್ವಸ್ಥತಗೊಂಡಿದ್ದು ಚೇತನ್ ನ್ನು ತತ್ ಕ್ಷಣ ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಗೆ ಕರೆದೊಯ್ಯಲಾಯಿತು. ಆದರೆ ಅಷ್ಟರೊಳಗೆ ಚೇತನ್ ಮೃತಪಟ್ಟಿದ್ದರು.
ಚೇತನ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್ವೇರ್ ಕಂಪನಿಯ ಉದ್ಯೋಗಿಯಾಗಿದ್ದು ಕೊರೊನಾ ಲಾಕ್ ಡೌನ್ ನಂತರ ಹಲವು ತಿಂಗಳಿಂದ ಮನೆಯಲ್ಲೇ ಕಾರ್ಯನಿರ್ವಹಿಸುತ್ತಿದ್ದ. ಈತನದ್ದು ತೀರಾ ಬಡತನದ ಕುಟುಂಬವಾಗಿದ್ದು ಸಾಕಷ್ಟು ಕಷ್ಟಪಟ್ಟು ಇಂಜಿನಿಯರಿಂಗ್ ಪದವಿ ಮುಗಿಸಿದ್ದ ಹಾಗೂ ಮನೆಗೆ ಆಧಾರವಾಗಿದ್ದ. ಮೃತನು ತಂದೆ,ತಾಯಿ, ಸಹೋದರಿಯನ್ನು ಅಗಲಿದ್ದಾನೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…