ಕುಂದಾಪುರ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ ಮಣೂರಿನ ಲೋಹಿತ್ ಪೂಜಾರಿ ಎಂಬಾತನನ್ನು ಕೋಟ ಪೋಲಿಸರು ಹಾಗೂ ಆಹಾರ ನಿರೀಕ್ಷಕರು ಜಂಟಿ ದಾಳಿ ನಡೆಸಿ ಬಂಧಿಸಿ ಸಾಗಾಟಕ್ಕೆ ಬಳಸುತ್ತಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಐಪಿಸಿ 3, 5, 6 (ಎ) , 7 ಇ ಸಿ ಕಾಯ್ದೆ ಮತ್ತು 3(2) , 18(1), ಪಿಡಿಎಸ್ ಆರ್ಡರ್ 2016 ಪ್ರಕಾರ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬ್ರಹ್ಮಾವರ ತಾಲೂಕು ಮಣೂರು ಗ್ರಾಮದ ಕೋಟ ಠಾಣಾ ಬಸ್ ನಿಲ್ದಾಣದ ಬಳಿ ಆರೋಪಿತ ತನ್ನ ಅಪೆ ಆಟೋ ರಿಕ್ಷಾ ವಾಹನ KA20B1906 ದಲ್ಲಿ ದಾಖಲಾತಿ ಇಲ್ಲದೆ ರೇಷನ್ ಅಕ್ಕಿಯನ್ನು ಶಿರಿಯಾರದಲ್ಲಿರುವ ಮಿಲ್ ಗೆ ಮಾರಾಟ ಮಾಡಲು ತೆಗೆದುಕೊಂಡು ಹೋಗುವಾಗ ಕೋಟ ಪೋಲಿಸರು ಬಂದಿಸಿದ್ದಾರೆ.ಸರಕಾರ ಬಡವರಿಗಾಗಿ ನೀಡುವ ಪಡಿತರ ಅಕ್ಕಿಯನ್ನುಅಕ್ರಮವಾಗಿ ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಕೂಡಿದ್ದು ಯಾವುದೇ ದಾಖಲಾತಿಗಳು ಇಲ್ಲದೇ ಇರುವುದರಿಂದ ಆರೋಪಿತನ ವಿರುದ್ದ ಪ್ರಕರಣ ದಾಖಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…