ಹಾಸನ: ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮತ್ತೊಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಈ ಬಾರಿ ರಾಜ್ಯ ರಾಜಕೀಯ, ಪ್ರಕೃತಿ ವಿಕೋಪದ ಬಗ್ಗೆ ಸ್ಪೋಟಕ ಭವಿಷ್ಯ ಹೇಳಿದ್ದಾರೆ.
ಶುಭಕೃತ ನಾಮ ಸಂವತ್ಸರದ ಫಲದಲ್ಲಿ ಗುಡುಗು, ಮಿಂಚು, ಗಾಳಿ, ಮಳೆ ಹೆಚ್ಚಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುತ್ತದೆ. ಬಯಲುಸೀಮೆ ಮಲೆನಾಡಾಗುತ್ತದೆ, ಮಲೆನಾಡು ಬಯಲುಸೀಮೆಯಾಗಲು ಬಯಸುತ್ತದೆ. ಇದು ಹೀಗೆಯೇ ಮುಂದುವರಿಯುತ್ತದೆ. ಈ ಸಂವತ್ಸರದ ಫಲ ನೋಡಿದರೆ ಮೇಘ ಘರ್ಜಿಸೀತು, ಭೂಮಿ ತಲ್ಲಣಗೊಂಡೀತು. ಭೂಮಿ ಕಂಪಿಸುತ್ತೆ, ಗುಡ್ಡಗಳು ಕುಸಿಯುತ್ತವೆ, ಕೆರೆ ಕಟ್ಟೆಗಳು ಒಡೆದು ಹೋಗುತ್ತವೆ. ಇದು ಈ ಸಂವತ್ಸರದ ಕಡೆಯವರೆಗೂ ಇರುತ್ತೆ ಎಂದು ನುಡಿದಿದ್ದಾರೆ.
ರಾಜಕೀಯ ಬಗ್ಗೆ ಭವಿಷ್ಯ ನುಡಿದಿದ್ದು. ರಾಜಕೀಯದಲ್ಲಿ ಕಲಹಗಳಾಗುತ್ತವೆ, ಗುಂಪುಗಳಾಗುತ್ತವೆ ಎಂದು ಹೇಳಿದ್ದಾರೆ.
ಆಶ್ವೀಜ ಕಾರ್ತಿಕದಲ್ಲಿ ದೇಶಕ್ಕೆ ಕಷ್ಟ, ಭಂಗ, ನೋವಿದೆ. ರೋಗ ರುಜನಗಳು ಹೆಚ್ಚುತ್ತವೆ, ಕಳ್ಳಕಾಕರ ಕಾಟಗಳು, ಅಪಮೃತ್ಯಗಳು, ಕೊಲೆಗಳು, ಮತೀಯ ಗಲಭೆಗಳು ಹೆಚ್ಚಾಗಿ ಅಂತರಾಷ್ಟ್ರೀಯ ವಿಕೋಪಕ್ಕೆ ತುತ್ತಾಗುತ್ತದೆ. ಎಲ್ಲವೂ ಇನ್ನೂ ಇದೆ, ಇನ್ನೂ ಹೆಚ್ಚುತ್ತದೆ. ರಾಜಕೀಯದಲ್ಲಿ ಕಲಹಗಳಾಗುತ್ತವೆ, ಗುಂಪುಗಳಾಗುತ್ತವೆ. ಮಳೆ ಬರುತ್ತೆ ಬೆಳೆ ಸಿಕ್ಕಲ್ಲ, ಬೆಳೆ ಬರುತ್ತೆ ಮಳೆ ತಿಂದಾಕುತ್ತದೆ. ಶುಭಕೃತನಾಮ ಸಂವತ್ಸದ ಫಲ ಅಶುಭವಾಗಿರುತ್ತದೆ. ಬಲಾಢ್ಯ ಪೃಥ್ವಿ ಹೆಚ್ಚುತ್ತ ಹೋಗುತ್ತದೆ. ಆಕಾಶ ಎಲ್ಲಿ ಬೇಕು ಅಲ್ಲಿ ಘರ್ಜಿಸುತ್ತೆ ಕಂಡಮಂಡಲ ಆಗುತ್ತೆ. ದೊಡ್ಡದೊಡ್ಡ ಪಟ್ಟಣಗಳಿಗೆ ಭಂಗವಾಗುತ್ತೆ. ಮತೀಯ ಗಲಭೆ ಇನ್ನೂ ಹೆಚ್ಚಾಗುತ್ತೆ. ಸಾವು ನೋವು ಇನ್ನೂ ಜಾಸ್ತಿ ಆಗುತ್ತೆ, ಅಶಾಂತಿ ಇದೆ.
ಕಾರ್ತೀಕ ಆಶ್ವೀಜದಲ್ಲಿ ರಾಷ್ಟ್ರ, ರಾಜ್ಯಮಟ್ಟದ ಗೊಂದಲಗಳು, ಸಾವು ನೋವುಗಳು ಆಗುವ ಲಕ್ಷಣ ಬಹಳ ಇದೆ. ಜನ ತಲ್ಲಣಗೊಳ್ಳುತ್ತಾರೆ, ಈ ತಿಂಗಳವರೆಗೂ ಕಾದುನೋಡಿ. ಶುಭಕೃತ ನಾಮ ಸಂವತ್ಸರದಲ್ಲಿ ಶುಭ ಆಗೋದಿಲ್ಲ. ಗಾಳಿ, ಮಳೆ, ವೃಕ್ಷಗಳು ಮರಿದು ಬೀಳುತ್ತವೆ. ವಿಪರೀತ ಮಿಂಚು ಗಾಳಿಯಾಗುತ್ತದೆ, ಸಾವು-ನೋವು ಹೆಚ್ಚಾಗುತ್ತದೆ, ಶುಭವಾದದ್ದಲ್ಲ. ಜಲಾಶಯಗಳು ತುಂಬಿ ಹರಿಯುತ್ತವೆ. ಕೆಲವು ಕಡೆ ಮಳೆ ಹೋದರೆ ಸಾಕು ಅಂತಾರೆ, ಕೆಲವು ಕಡೆ ಮಳೆ ಬೇಕು ಅಂತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…