Featured

ಕೋಮುಗಲಭೆಗಳಿಗೆ ಪ್ರಚೋದನೆ ನೀಡುವವರು ಯಾರೇ ಇರಲಿ ಅಂಥಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಬಿಎಸ್ ವೈ ಸೂಚನೆ -Vishwanews24

ಬೆಂಗಳೂರು: ರಾಜ್ಯದಲ್ಲಿ ಅಮಾಯಕ ಜನರನ್ನು ವಂಚನೆ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇವುಗಳಿಗೆ ಕಡಿವಾಣ ಹಾಕುವಂತೆ ಪೊಲೀಸರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಸೂಚನೆ ನೀಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ಅಮಾಯಕ ಜನರನ್ನು ವಂಚಿಸುವ ಪ್ರಕರಣಗಳಿಗೆ ಕಡಿವಾಣ ಹಾಕುವಂತೆ ಸೂಚನೆ ನೀಡಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನ ಬಗ್ಗೆ ಇಡೀ ಜಗತ್ತು ಗಮನಹರಿಸುತ್ತಿದೆ. ನಗರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ನಿಗಾವಹಿಸಬೇಕು. ಆಧುನಿಕ ತಂತ್ರಜ್ಞಾನ ಬಳಸಿ ನಡೆಯುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಅಪರಾಧ ಪ್ರಕರಣಗಳನ್ನು ತಗ್ಗಿಸುವ ನಿಟ್ಟಿನಲ್ಲಿ ರಾತ್ರಿ 8ರಿಂದ ಬೆಳಗ್ಗೆ 6 ಗಂಟೆಗಳ ವರಗೆ ಗಸ್ತು ತಿರುಗುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಗರದಲ್ಲಿ ಶಂಕಿತ ಭಯೋತ್ಪಾದಕರು ಆಶ್ರಯ ಪಡೆದಿರುವ ಬಗ್ಗೆ ಇದೇ ವೇಳೆ ಪ್ರಸ್ತಾಪಿಸಿರುವ ಅವರು, ಭಯೋತ್ಪಾದಕರ ಬಗ್ಗೆ ಎಚ್ಚರವಹಿಸಿ. ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಬೇಕು. ರಾಜ್ಯದಲ್ಲಿ ಕೋಮುಗಲಭೆ ಸಂಭವಿಸದಂತೆ ಎಚ್ಚರ ವಹಿಸಬೇಕು. ಕೋಮುಗಲಭೆಗಳಿಗೆ ಪ್ರಚೋದನೆ ನೀಡುವವರು ಯಾರೇ ಇರಲಿ ಅಂಥಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

 

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

8 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

9 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

9 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

9 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

9 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

11 hours ago