ಲಖನೌ: ಕಾಂಗ್ರೆಸ್ ವಿರುದ್ಧ ಬುಧವಾರ ಮತ್ತೆ ವಾಗ್ದಾಳಿ ನಡೆಸಿರುವ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರು ದೇಶದಲ್ಲಿ ಕೋಮುವಾದಿಗಳು ಮತ್ತಷ್ಟು ಬಲಿಷ್ಠವಾಗುತ್ತಿರುವುದಕ್ಕೇ ಕಾಂಗ್ರೆಸ್ ನ ದ್ವಿಮುಖ ನೀತಿಯೇ ಕಾರಣ ಎಂದು ಆರೋಪಿಸಿದ್ದಾರೆ.
ಕೋಮುವಾದಿಗಳು ಮತ್ತಷ್ಟು ಬಲಿಷ್ಠರಾಗುತ್ತಿರುವುದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ ಎಂದಿರುವ ಮಾಯಾವತಿ, ಕಾಂಗ್ರೆಸ್ ಕೋಮುವಾದಿ ಶಕ್ತಿಗಳನ್ನು ದುರ್ಬಳಗೊಳಿಸುವ ಬದಲು ಪ್ರತಿಪಕ್ಷಗಳನ್ನು ದುರ್ಬಲಗೊಳಿಸುವುದರಲ್ಲಿ ನಿರತವಾಗಿದೆ. ಜನ ಎಚ್ಚರಿಕೆ ವಹಿಸಬೇಕಾಗಿದೆ ಎಂದು ಮಾಯಾವತಿ ಟ್ವೀಟ್ ಮಾಡಿದ್ದಾರೆ.
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ರಾಜಸ್ಥಾನದ ಎಲ್ಲಾ ಆರು ಬಿಎಸ್ಪಿ ಶಾಸಕರೂ ಆಡಳಿತರೂಢ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಈ ಬಗ್ಗೆ ನಿನ್ನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಮಾಯಾವತಿ, ಕಾಂಗ್ರೆಸ್ ನಂಬಿಕೆಗೆ ಅರ್ಹವಲ್ಲ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ ಎಂದು ಟೀಕಿಸಿದ್ದರು.
ಕಾಂಗ್ರೆಸ್, ಬಿಎಸ್ಪಿ ಶಾಸಕರನ್ನು ಖರೀದಿಸುವ ಮೂಲಕ ನಂಬಿಕೆಗೆ ಅರ್ಹವಲ್ಲದ ಪಕ್ಷ ಎಂಬುದನ್ನು ಮತ್ತೆ ಸಾಬೀತುಪಡಿಸಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬಿಎಸ್ಪಿ ತನ್ನ ಬೇಷರತ್ತಾದ ಬೆಂಬಲವನ್ನು ನೀಡಿದ್ದರೂ ಸಹ ಇದು ನಂಬಿಕೆ ದ್ರೋಹ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…