Featured

ಕೋಲಾರ: ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ ; ನವಜೋಡಿ ಸಾವಿನ ಬಗ್ಗೆ ಕುಟುಂಬಸ್ಥರ ಸಂಶಯ – vishwanews24

ಪ್ರೀತಿಸಿ ಮದುವೆಯಾಗಿದ್ದ ನವಜೋಡಿ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡು ಸಾವು ಪ್ರಕರಣ..

ಇದರಲ್ಲಿ ಮೂರನೇ ವ್ಯಕ್ತಿ ಇದ್ದಾರೆ ,ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ..

ನವಜೋಡಿ ಸಾವಿನ ಬಗ್ಗೆ ಕುಟುಂಬಸ್ಥರ ಸಂಶಯ

ಕೋಲಾರ: ಪರಸ್ಪರ ಪ್ರೀತಿಸಿ ಬುಧವಾರ (ಆ.7) ಬೆಳಗ್ಗೆ ಮದುವೆಯಾದ ನವಜೋಡಿ, ಅದೇ ದಿನ ಮಧ್ಯಾಹ್ನ ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡ ಪರಿಣಾಮ ನವವಧು ಸಾವನ್ನಪ್ಪಿದ್ದಳು. ಗುರುವಾರ (ಇಂದು) ಚಿಕಿತ್ಸೆ ಫಲಕಾರಿಯಾಗದೇ ವರನೂ ಸಾವನ್ನಪ್ಪಿರುವ ಘಟನೆ ನಡೆದಿದೆ.

ಆಂಧ್ರದ ಬೈನಪಲ್ಲಿ ಗ್ರಾಮದ ಲಿಖಿತಾಶ್ರೀ (20) ಬುಧವಾರ ಕೋಲಾರದಲ್ಲಿ  ಮೃತಪಟ್ಟಿದ್ದಳು. ಚಂಬರಸನಹಳ್ಳಿಯ ನವೀನ್ (28) ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕೋಲಾರದ ಆರ್.ಎಲ್. ಜಾಲಪ್ಪ ಆಸ್ಪತ್ರೆಯಲ್ಲಿ ಬುಧವಾರ ದಾಖಲಾಗಿದ್ದ ನವೀನ್‌ ನನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರಾತ್ರಿ ರವಾನಿಸಲಾಗಿತ್ತು. ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನವೀನ್ ಮತ್ತು ಲಿಖಿತಾಶ್ರೀ ಜೋಡಿ ಪರಸ್ಪರ ಒಪ್ಪಿ ಮದುವೆಯಾಗಿದ್ದರು. ಬುಧವಾರ ಮುಂಜಾನೆ ಹಿರಿಯರ ಸಮ್ಮುಖದಲ್ಲಿ ಚಂಬರಸನಹಳ್ಳಿಯಲ್ಲಿ ಮದುವೆಯಾದರು. ಮದುವೆ ಕೆಲಗಂಟೆಗಳ ನಂತರ ನವಜೋಡಿ ರೂಮಿಗೆ ಹೋಗಿದ್ದಾರೆ. ಬಳಿಕ ಮಚ್ಚಿನಿಂದ ಪರಸ್ಪರರ ಮೇಲೆ ಹಲ್ಲೆ ನಡೆಸಿಕೊಂಡಿದ್ದಾರೆ. ಮಾರಾಮಾರಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಕೆಜಿಎಫ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಲಿಖಿತಾಶ್ರೀ ಸಾವನ್ನಪ್ಪಿದ್ದಳು. ನವೀನ್ ಸ್ಥಿತಿ ಚಿಂತಾಜನಕವಾಗಿದ್ದರಿಂದ ಆತನನ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ವರನೂ ಸಾವನ್ನಪ್ಪಿದ್ದಾನೆ.

ಘಟನಾ ಸ್ಥಳಕ್ಕೆ ಬುಧವಾರ ಅಂಡರ್‌ಸನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇಬ್ಬರೂ ಪ್ರೀತಿಸಿ ಎರಡೂ ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಿದ್ದರು. ಬೆಳಗಿನ ಜಾವ ಇಬ್ಬರಿಗೂ ಮದುವೆಯಾಗಿತ್ತು. ಮದುವೆ ನಂತರ ಇಬ್ಬರೂ ಮನೆಯ ಕೊಠಡಿಗೆ ಹೋಗಿದ್ದರು. ಕೆಲ ಹೊತ್ತಿನಲ್ಲೇ ಕೊಠಡಿಯಲ್ಲಿದ್ದ ನವಜೋಡಿ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ. ಇಬ್ಬರ ಗಲಾಟೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದರು.

ಮೂರನೇ ವ್ಯಕ್ತಿ ಇದರಲ್ಲಿ ಇದ್ದಾರೆ:
ಇಬ್ಬರ ಸಾವಿನ ಕುರಿತು ಪ್ರತಿಕ್ರಿಯೆ ನೀಡಿರುವ ಮೃತ ಲಿಖಿತಶ್ರೀ ಕುಟುಂಬಸ್ಥರು, ನವಜೋಡಿಗಳು ಇಬ್ಬರೂ ಅನ್ಯೂನ್ಯವಾಗಿದ್ದವರು, ಪ್ರೀತಿಸಿ ಮದುವೆಯಾಗಿದ್ದವರು. ಇಬ್ಬರು ಹೊಡರದಾಡಿಕೊಂಡಿರುವುದೇ ಅನುಮಾನ. ಯಾರೋ ಮೂರನೇ ವ್ಯಕ್ತಿ ಇದರಲ್ಲಿ ಇದ್ದಾರೆ. ನಾವೂ ಮದುವೆಗೆ ಹೋಗಿದ್ದೆವು, ಇಬ್ಬರೂ ತುಂಬಾ ಖುಷಿಯಿಂದಲೇ ಇದ್ದರು. ಇಬ್ಬರನ್ನೂ ಯಾರೋ ಹೊಡೆದಿರುವ ಅನುಮಾನ ಇದೆ ಅಂತಾ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

14 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago