ಕೋಲಾರ: ಜಿಲ್ಲೆಯ ನರಸಾಪುರದಲ್ಲಿ ವ್ಯಕ್ತಿಯಬ್ಬ ಆಟೋ ಓಡಿಸಿಕೊಂಡೆ ಈಗಾಗಲೇ ಮೂರು ಹುಡುಗಿಯರನ್ನು ಮದುವೆಯಾಗಿ ಮೋಸ ಮಾಡಿರುವ ಘಟನೆ ನಡೆದಿದೆ. ಇದೀಗ ಅಪ್ರಾಪ್ತಯೊಂದಿಗೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ನರಸಾಪುರ ಗ್ರಾಮದ ಆಟೋ ಚಾಲಕ ಅಲಿಯಾಸ್ ಸಂತೋಷ್ ಎಂಬಾತ ನಿತ್ಯ ಕೂಲಿ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.
ಸಂತೋಷ್ ನರಸಾಪುರ ಗ್ರಾಮದಲ್ಲೇ ಆಟೋ ಓಡಿಸಿಕೊಂಡಿದ್ದು, ನಿತ್ಯ ಕೂಲಿ ಕೆಲಸದವರನ್ನು ಕೆರೆದುಕೊಂಡು ಹೋಗುತ್ತಿದ್ದ. ಅದರಲ್ಲಿ ಈ ಬಾಲಕಿ ಹಾಗೂ ಆಕೆಯ ಅಜ್ಜಿ ಕೂಡಾ ನಿತ್ಯ ಕೂಲಿ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಡಿ. 5ರಂದು ಬಾಲಕಿಯ ಅಜ್ಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗಿರಲಿಲ್ಲ. ಈ ವೇಳೆ ಬಾಲಕಿಯನ್ನು ಪುಸಲಾಯಿಸಿರುವ ಸಂತೋಷ್ ಕರೆದುಕೊಂಡು ನಾಪತ್ತೆಯಾಗಿದ್ದಾನೆ.
ಕೆಲಸಕ್ಕೆಂದು ಹೋದ 17 ವರ್ಷದ ಬಾಲಕಿ ಮತ್ತೆ ವಾಪಸ್ ಬಂದಿಲ್ಲ, ಎಲ್ಲಿ ಹೋಗಿದ್ದಾಳೆ ಎಂದು ಪರಿಶೀಲನೆ ನಡೆಸಲಾಗಿ, ಬಾಲಕಿಯನ್ನು ಆಟೋ ಡ್ರೈವರ್ ಸಂತೋಷ್ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎನ್ನುವುದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಬಾಲಕಿಯ ಪೊಷಕರು ವೇಮಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…