ಕೋಲಾರ: ಜಿಲ್ಲೆಯ ನರಸಾಪುರದಲ್ಲಿ ವ್ಯಕ್ತಿಯಬ್ಬ ಆಟೋ ಓಡಿಸಿಕೊಂಡೆ ಈಗಾಗಲೇ ಮೂರು ಹುಡುಗಿಯರನ್ನು ಮದುವೆಯಾಗಿ ಮೋಸ ಮಾಡಿರುವ ಘಟನೆ ನಡೆದಿದೆ. ಇದೀಗ ಅಪ್ರಾಪ್ತಯೊಂದಿಗೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ನರಸಾಪುರ ಗ್ರಾಮದ ಆಟೋ ಚಾಲಕ ಅಲಿಯಾಸ್ ಸಂತೋಷ್ ಎಂಬಾತ ನಿತ್ಯ ಕೂಲಿ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.
ಸಂತೋಷ್ ನರಸಾಪುರ ಗ್ರಾಮದಲ್ಲೇ ಆಟೋ ಓಡಿಸಿಕೊಂಡಿದ್ದು, ನಿತ್ಯ ಕೂಲಿ ಕೆಲಸದವರನ್ನು ಕೆರೆದುಕೊಂಡು ಹೋಗುತ್ತಿದ್ದ. ಅದರಲ್ಲಿ ಈ ಬಾಲಕಿ ಹಾಗೂ ಆಕೆಯ ಅಜ್ಜಿ ಕೂಡಾ ನಿತ್ಯ ಕೂಲಿ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಡಿ. 5ರಂದು ಬಾಲಕಿಯ ಅಜ್ಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗಿರಲಿಲ್ಲ. ಈ ವೇಳೆ ಬಾಲಕಿಯನ್ನು ಪುಸಲಾಯಿಸಿರುವ ಸಂತೋಷ್ ಕರೆದುಕೊಂಡು ನಾಪತ್ತೆಯಾಗಿದ್ದಾನೆ.
ಕೆಲಸಕ್ಕೆಂದು ಹೋದ 17 ವರ್ಷದ ಬಾಲಕಿ ಮತ್ತೆ ವಾಪಸ್ ಬಂದಿಲ್ಲ, ಎಲ್ಲಿ ಹೋಗಿದ್ದಾಳೆ ಎಂದು ಪರಿಶೀಲನೆ ನಡೆಸಲಾಗಿ, ಬಾಲಕಿಯನ್ನು ಆಟೋ ಡ್ರೈವರ್ ಸಂತೋಷ್ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎನ್ನುವುದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಬಾಲಕಿಯ ಪೊಷಕರು ವೇಮಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…