Featured

ಕೋಲಾರ : 3 ಮದುವೆಯಾದ್ರೂ ಅಪ್ರಾಪ್ತೆಯೊಂದಿಗೆ ಪರಾರಿಯಾದ ಆಟೋ ಚಾಲಕ – VIshwanews24

ಕೋಲಾರ : 3 ಮದುವೆಯಾದ್ರೂ ಅಪ್ರಾಪ್ತೆಯೊಂದಿಗೆ ಪರಾರಿಯಾದ ಆಟೋ ಚಾಲಕ

ಕೋಲಾರ: ಜಿಲ್ಲೆಯ ನರಸಾಪುರದಲ್ಲಿ ವ್ಯಕ್ತಿಯಬ್ಬ ಆಟೋ ಓಡಿಸಿಕೊಂಡೆ ಈಗಾಗಲೇ ಮೂರು ಹುಡುಗಿಯರನ್ನು ಮದುವೆಯಾಗಿ ಮೋಸ ಮಾಡಿರುವ ಘಟನೆ ನಡೆದಿದೆ. ಇದೀಗ ಅಪ್ರಾಪ್ತಯೊಂದಿಗೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ನರಸಾಪುರ ಗ್ರಾಮದ ಆಟೋ ಚಾಲಕ ಅಲಿಯಾಸ್ ಸಂತೋಷ್ ಎಂಬಾತ ನಿತ್ಯ ಕೂಲಿ ಕೆಲಸಕ್ಕೆಂದು ಕರೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಕರೆದುಕೊಂಡು ಪರಾರಿಯಾಗಿದ್ದಾನೆ.

ಸಂತೋಷ್ ನರಸಾಪುರ ಗ್ರಾಮದಲ್ಲೇ ಆಟೋ ಓಡಿಸಿಕೊಂಡಿದ್ದು, ನಿತ್ಯ ಕೂಲಿ ಕೆಲಸದವರನ್ನು ಕೆರೆದುಕೊಂಡು ಹೋಗುತ್ತಿದ್ದ. ಅದರಲ್ಲಿ ಈ ಬಾಲಕಿ ಹಾಗೂ ಆಕೆಯ ಅಜ್ಜಿ ಕೂಡಾ ನಿತ್ಯ ಕೂಲಿ ಕೆಲಸಕ್ಕೆ ಹೋಗಿ ಬರುತ್ತಿದ್ದರು. ಡಿ. 5ರಂದು ಬಾಲಕಿಯ ಅಜ್ಜಿ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗಿರಲಿಲ್ಲ. ಈ ವೇಳೆ ಬಾಲಕಿಯನ್ನು ಪುಸಲಾಯಿಸಿರುವ ಸಂತೋಷ್ ಕರೆದುಕೊಂಡು ನಾಪತ್ತೆಯಾಗಿದ್ದಾನೆ.

ಕೆಲಸಕ್ಕೆಂದು ಹೋದ 17 ವರ್ಷದ ಬಾಲಕಿ ಮತ್ತೆ ವಾಪಸ್ ಬಂದಿಲ್ಲ, ಎಲ್ಲಿ ಹೋಗಿದ್ದಾಳೆ ಎಂದು ಪರಿಶೀಲನೆ ನಡೆಸಲಾಗಿ, ಬಾಲಕಿಯನ್ನು ಆಟೋ ಡ್ರೈವರ್ ಸಂತೋಷ್ ಆಕೆಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿದ್ದಾನೆ ಎನ್ನುವುದು ತಿಳಿದು ಬಂದಿದೆ. ವಿಷಯ ತಿಳಿದ ಕೂಡಲೇ ಬಾಲಕಿಯ ಪೊಷಕರು ವೇಮಗಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Vishwa News 24

Recent Posts

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ – vishwanews24

ಮುಂಬೈ: ಹೆಂಡತಿ ಮೇಲಿನ ಅನುಮಾನಕ್ಕೆ ಮನೆ ತುಂಬಾ ಸಿಸಿಟಿವಿ ಅಳವಡಿಸಿದ್ದ ಪತಿ ; ಕಿರುಕುಳ ತಾಳಲಾರದೇ ಪತ್ನಿ ಆತ್ಮಹತ್ಯೆ ಮುಂಬೈ:…

28 minutes ago

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ – vishwanews24

ಕಾಪು : ಸ್ಕೂಟಿಗೆ ಬಸ್ ಢಿಕ್ಕಿ ; ಸವಾರ ಗಂಭೀರ ಕಾಪು: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸಾಯಿ ಸರ್ವಿಸ್…

50 minutes ago

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ – vishwanews24

ಬೆಳ್ತಂಗಡಿ ಸೇತುವೆ ಪುನಃ ನಿರ್ಮಾಣ ಕಾಮಗಾರಿ: ಸಂಚಾರ ಮಾರ್ಗ ಬದಲಾವಣೆ ಮಂಗಳೂರು: ಬೆಳ್ತಂಗಡಿ ತಾಲೂಕಿನ ಉಜಿರೆ-ಇಂದಬೆಟ್ಟು ಜಿಲ್ಲಾ ಮುಖ್ಯ ರಸ್ತೆಯಲ್ಲಿನ…

57 minutes ago

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ – vishwanews24

ಅನುಮತಿ ಇಲ್ಲದೆ ವ್ಯಕ್ತಿಯೊಬ್ಬರ ಖಾಸಗಿ ಚಿತ್ರ ಹಂಚಿಕೊಂಡರೆ ತಕ್ಷಣ ಎಫ್‌ಐಆರ್ ಗೆ ಆದೇಶ ಬೆಂಗಳೂರು, : ವ್ಯಕ್ತಿಯೊಬ್ಬರ ಒಪ್ಪಿಗೆಯಿಲ್ಲದೆ ಅವರ…

1 hour ago

ನಾವೇನು ಆಪರೇಷನ್ ಮಾಡೋಣ? ನಮ್ಮದು ಸಣ್ಣ ಪಕ್ಷ :  ಹೆಚ್‌ಡಿಕೆ ವಾಗ್ದಾಳಿ – vishwanews24

ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ ? :  ಹೆಚ್‌ಡಿಕೆ ವಾಗ್ದಾಳಿ ಬೆಂಗಳೂರು: ನಮ್ಮದು ಸಣ್ಣ…

1 hour ago

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ – vishwanews24

ಮಂಗಳೂರು : ಶಾಸ್ತ್ರೀಯ ನೃತ್ಯ ಕಲಾವಿದೆಯಾಗಿ ರೆಮೋನಾ ಎವೆಟ್ ಪೆರೇರಾ ಆಯ್ಕೆ ಮಂಗಳೂರು : ಮಂಗಳೂರಿನ ಸಂತ ಅಲೋಸಿಯೆಸ್ ಪರಿಗಣಿತ…

1 hour ago