ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದು, 25 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ನಡೆದಿದೆ.
ಕಾಂಚನ್ಜುಂಗಾ ಎಕ್ಸ್ಪ್ರೆಸ್ ಅಸ್ಸಾಂನ ಸಿಲ್ಚಾರ್ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿದ್ದ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾಂಚನ್ಜುಂಗಾ ಎಕ್ಸ್ಪ್ರೆಸ್ನ ಎರಡು ಬೋಗಿಗಳು ಹಳಿತಪ್ಪಿವೆ ಎಂದು ವರದಿಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ವೈದ್ಯರು ಮತ್ತು ವಿಪತ್ತು ನಿರ್ವಹಣಾ ತಂಡಗಳನ್ನು ರವಾನಿಸಲಾಗಿದೆ ಎಂದು ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಗಿದೆ. ಕಾಂಚನ್ಜುಂಗಾ ಎಕ್ಸ್ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಡಿಎಂ, ಎಸ್ಪಿ, ವೈದ್ಯರು, ಅಂಬುಲೆನ್ಸ್ ಮತ್ತು ವಿಪತ್ತು ತಂಡಗಳು ಘಟನಾ ಸ್ಥಳಕ್ಕೆ ಧಾವಿಸಿವೆ. ಪಾರುಗಾಣಿಕಾ, ಚೇತರಿಕೆ, ವೈದ್ಯಕೀಯ ನೆರವಿಗಾಗಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…